ಕಾರವಾರ: ಎನ್ಸಿಸಿಯ ಕೆಡೆಟ್ಗಳಿಗೆ ಇದೇ ಮೊದಲ ಬಾರಿಗೆ ಕಾರವಾರದ ಸಮುದ್ರ ಹಾಗೂ ಕಾಳಿ ನದಿ ವ್ಯಾಪ್ತಿಯಲ್ಲಿ ಹಾಯಿ ದೋಣಿಗಳಲ್ಲಿ ಸಮುದ್ರಯಾನ ತರಬೇತಿ ಆರಂಭಿಸಲಾಗಿದೆ.
ಈ ತರಬೇತಿ ಅ.2ರ ತನಕ ನಡೆಯಲಿದೆ. ತರಬೇತಿಯಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯಗಳ ವ್ಯಾಪ್ತಿಯ ಎನ್.ಸಿ.ಸಿ ಕೆಡೆಟ್ಗಳು ಅತಿ ಉತ್ಸಾಹದಿಂದಲೇ ಪಾಲ್ಗೊಂಡಿದ್ದು, ಸಮುದ್ರದಲ್ಲಿ ಹಾಯಿ ದೋಣಿಗಳ ಓಟ ನೋಡುಗರ ಗಮನ ಸೆಳೆಯುತ್ತಿದೆ.
ಪ್ರತಿ ವರ್ಷ ಗೋವಾದಲ್ಲಿ ನಡೆಯುತ್ತಿದ್ದ ಈ ತರಬೇತಿ ಶಿಬಿರವನ್ನ ಇದೇ ಮೊದಲ ಬಾರಿಗೆ ಕಾರವಾರದಲ್ಲಿ ಆಯೋಜನೆ ಮಾಡಲಾಗಿದೆ. 10 ದಿನ ನಡೆಯಲಿರುವ ಈ ಶಿಬಿರದಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 60 ಎನ್ಸಿಸಿ ಕೆಡೆಟ್ಗಳು ಪಾಲ್ಗೊಂಡಿದ್ದಾರೆ.
ಕಾರವಾರದ 8ನೇ ಕರ್ನಾಟಕ ನೇವಲ್ ಎನ್ಸಿಸಿ ಬಟಾಲಿಯನ್ ಆಯೋಜಿಸಿರುವ ಈ ಶಿಬಿರವು ಕರ್ನಾಟಕ ಬಟಾಲಿಯನ್ ಕಮಾಂಡಿಂಗ್ ಆಫೀಸರ್ ಸತ್ಯನಾಥ ಭೋಸ್ಲೆ, ಕಮಾಂಡರ್ ಭರತ್ಕುಮಾರ್, ಕಮಾಂಡರ್ ರಿಜಿ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ತಲಾ 27 ಅಡಿಗಳಷ್ಟು ಉದ್ದದ ಮೋಟರ್ ಅಳವಡಿಸಿದ ಮೂರು ಹಾಯಿ ದೋಣಿಗಳಲ್ಲಿ, ಕಾಳಿ ನದಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತಿದಿನ 20- 25 ಕಿ.ಮೀ. ದೂರದ ಯಾನದಲ್ಲಿ ಕೆಡೆಟ್ಗಳು ಪಾಲ್ಗೊಳ್ಳುತ್ತಿದ್ದಾರೆ. ಶಿಬಿರದ 10 ದಿನದಲ್ಲಿ ಸುಮಾರು 200ಕ್ಕೂ ಹೆಚ್ಚು ಕಿಲೋ ಮೀಟರ್ಗಳನ್ನ ಕೆಡೆಟ್ಗಳು ಪೂರೈಸಬೇಕಿದೆ.
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…
ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…
ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…