ಕಾರವಾರ: ಎನ್ಸಿಸಿ ಕೆಡೆಟ್ ಗಳಿಗೆ ಸಮುದ್ರಯಾನ ತರಬೇತಿ

ಕಾರವಾರ: ಎನ್‌ಸಿಸಿಯ ಕೆಡೆಟ್‌ಗಳಿಗೆ ಇದೇ ಮೊದಲ ಬಾರಿಗೆ ಕಾರವಾರದ ಸಮುದ್ರ ಹಾಗೂ ಕಾಳಿ ನದಿ ವ್ಯಾಪ್ತಿಯಲ್ಲಿ ಹಾಯಿ ದೋಣಿಗಳಲ್ಲಿ ಸಮುದ್ರಯಾನ ತರಬೇತಿ ಆರಂಭಿಸಲಾಗಿದೆ.

ಈ ತರಬೇತಿ ಅ.2ರ ತನಕ ನಡೆಯಲಿದೆ. ತರಬೇತಿಯಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯಗಳ ವ್ಯಾಪ್ತಿಯ ಎನ್.ಸಿ.ಸಿ ಕೆಡೆಟ್‌ಗಳು ಅತಿ ಉತ್ಸಾಹದಿಂದಲೇ ಪಾಲ್ಗೊಂಡಿದ್ದು, ಸಮುದ್ರದಲ್ಲಿ ಹಾಯಿ ದೋಣಿಗಳ ಓಟ ನೋಡುಗರ ಗಮನ ಸೆಳೆಯುತ್ತಿದೆ.

ಪ್ರತಿ ವರ್ಷ ಗೋವಾದಲ್ಲಿ ನಡೆಯುತ್ತಿದ್ದ ಈ ತರಬೇತಿ ಶಿಬಿರವನ್ನ ಇದೇ ಮೊದಲ ಬಾರಿಗೆ ಕಾರವಾರದಲ್ಲಿ ಆಯೋಜನೆ ಮಾಡಲಾಗಿದೆ. 10 ದಿನ ನಡೆಯಲಿರುವ ಈ ಶಿಬಿರದಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 60 ಎನ್‌ಸಿಸಿ ಕೆಡೆಟ್‌ಗಳು ಪಾಲ್ಗೊಂಡಿದ್ದಾರೆ.

ಕಾರವಾರದ 8ನೇ ಕರ್ನಾಟಕ ನೇವಲ್ ಎನ್‌ಸಿಸಿ ಬಟಾಲಿಯನ್ ಆಯೋಜಿಸಿರುವ ಈ ಶಿಬಿರವು ಕರ್ನಾಟಕ ಬಟಾಲಿಯನ್ ಕಮಾಂಡಿಂಗ್ ಆಫೀಸರ್ ಸತ್ಯನಾಥ ಭೋಸ್ಲೆ, ಕಮಾಂಡರ್ ಭರತ್‌ಕುಮಾರ್, ಕಮಾಂಡರ್ ರಿಜಿ ಅವರ ನೇತೃತ್ವದಲ್ಲಿ ನಡೆಯುತ್ತಿದೆ.

ತಲಾ 27 ಅಡಿಗಳಷ್ಟು ಉದ್ದದ ಮೋಟರ್ ಅಳವಡಿಸಿದ ಮೂರು ಹಾಯಿ ದೋಣಿಗಳಲ್ಲಿ, ಕಾಳಿ ನದಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತಿದಿನ 20- 25 ಕಿ.ಮೀ. ದೂರದ ಯಾನದಲ್ಲಿ ಕೆಡೆಟ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಶಿಬಿರದ 10 ದಿನದಲ್ಲಿ ಸುಮಾರು 200ಕ್ಕೂ ಹೆಚ್ಚು ಕಿಲೋ ಮೀಟರ್‌ಗಳನ್ನ ಕೆಡೆಟ್‌ಗಳು ಪೂರೈಸಬೇಕಿದೆ.

Sneha Gowda

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

12 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

36 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago