News Karnataka Kannada
Friday, May 17 2024
ಉತ್ತರಕನ್ನಡ

ಕಾರವಾರ: ಕುಗ್ರಾಮದ ಜನರ ಬೇಡಿಕೆ ಆಲಿಸಿದ ಸತೀಶ್ ಸೈಲ್

Karwar: Satish Sail listens to the demands of the people of a remote village
Photo Credit : By Author

ಕಾರವಾರ: ತಾಲೂಕಿನ ಕುಗ್ರಾಮಗಳಾದ ಗೋಯರ್ ಹಾಗೂ ಕೋಟೆ ಗ್ರಾಮಗಳಿಗೆ ಮಾಜಿ ಶಾಸಕ ಸತೀಶ್ ಸೈಲ್ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.

ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಈ ಗ್ರಾಮಗಳ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು. ಪ್ರಮುಖವಾಗಿ ಈ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು ಜನರು ಸುಮಾರು 3 ಕಿ.ಮೀ. ದೂರದಿಂದ ನೀರನ್ನು ತಂದು ಕುಡಿಯುವ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು ಶಾಲಾ – ಕಾಲೇಜಿಗೆ ಹೋಗಬೇಕಾದರೆ ಕಾರವಾರ, ಸಿದ್ಧರ ಮುಖಾಂತರ ಹೋಗಬೇಕಾಗುತ್ತದೆ. ಆದರೆ ಅಲ್ಲಿಯೂ ಸೂಕ್ತ ಬಸ್ ವ್ಯವಸ್ಥೆ ಇರುವುದಿಲ್ಲ. ಈ ಗ್ರಾಮಗಳಿಂದ ಸುಮಾರು 6 ಕಿ.ಮೀ. ನಡೆದು ಹೋಗಿ ಅಲ್ಲಿಂದ ಬಸ್ಸು ಹತ್ತಿಕೊಂಡು ಹೋಗಬೇಕಾದ ಪರಿಸ್ಥಿತಿ ವಿದ್ಯಾರ್ಥಿಗಳಿಗೆ ಹಾಗು ಇಲ್ಲಿಯ ಜನರಿಗೆ ಇದೆ.

ಇದರಿಂದಾಗಿ ಸಮಯಕ್ಕೆ ಸರಿಯಾಗಿ ಶಾಲೆಗಳಿಗೆ ಹೋಗಲಾಗದೇ ಹಾಗು ಜನರಿಗೆ ಕೋರ್ಟ್ , ಕಚೇರಿ ಇತರೇ ಕಾರ್ಯಗಳಿಗೆ ಹೋಗಲು ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಘಥರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.
ಇನ್ನು ಸರಿಯಾದ ಬೀದಿ ದೀಪದ ವ್ಯವಸ್ಥೆ ಕೂಡ ಇಲ್ಲ. ನೆಟ್‌ವರ್ಕ್ ಸಮಸ್ಯೆಯೂ ಇದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಹಾಗು ಈ ಕುಗ್ರಾಮದಲ್ಲಿ ಜನರಿಗೆ ಹಠಾತ್ ಆರೋಗ್ಯ ಸಮಸ್ಯೆ ಉಂಟಾದರೆ ಅತ್ಯಂತ ಗಂಭೀರ ಪರಿಸ್ಥಿತಿ ಎದುರಾಗುತ್ತದೆ ಇವೇ ಮೊದಲಾದ ಸಮಸ್ಯೆಗಳನ್ನು ಆಲಿಸಿದ ಸೈಲ್ ಅತ್ಯಂತ ಪ್ರಮುಖ ಹಾಗು ಮಾನವೀಯ ಈ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಜನರ ಬೇಡಿಕೆಯಂತೆ ಈ ಪ್ರದೇಶದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಸ್ಥಳೀಯರ ಸಂಕಷ್ಟಗಳಿಗೆ ಸೂಕ್ತ ಪರಿಹಾರ ಒದಗಿಸಿಕೊಡಲು ವಿನಂತಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ರವೀಂದ್ರ ಅಮದಳ್ಳಿ, ರವಿಕಾಂತ ತಳೇಕರ, ಸಮೀಪ ಗೋಪಶಿಟ್ಟಾ, ಅಜಯ್ ಸಿಗ್ಗಿ, ಪರಶುರಾಮ ಚೌಹಾಣ್, ಸುರೇಶ ಹಳ್ಳೂರ ಮುಂತಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು