ಉತ್ತರಕನ್ನಡ

ಕಾರವಾರ: ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಸಮಾಜದ ಏಳಿಗೆಗೆ ಅನೇಕ ಯೋಜನೆ ಜಾರಿ

ಕಾರವಾರ: ಸರ್ಕಾರ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಸಮಾಜದ ಏಳಿಗೆಗೆ ಅನೇಕ ಯೋಜನೆಗಳನ್ನು ನೀಡಿದ್ದು, ಅದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.

ಕಾರವಾರದ ಪ್ರಿಮಿಯರ್ ಹೋಟೆಲ್ ಸಭಾಂಗಣದಲ್ಲಿ ರವಿವಾರ ನಡೆದ ಉತ್ತರಕನ್ನಡ ಜಿಲ್ಲಾ ಗುನಗಿ ಸಮಾಜ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಮೇಲಕ್ಕೆ ಬರಬೇಕು ಎಂದರೆ ಎಲ್ಲರೂ ಶ್ರಮಿಸಬೇಕು. ಕಲಬುರ್ಗಿಯಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ 250 ಕ್ಕೂ ಹೆಚ್ಚು ಸಮಾಜದವರು ಪಾಲ್ಗೊಂಡಿದ್ದರು. ಎಲ್ಲರನ್ನೂ ಒಗ್ಗೂಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು. ಗುನಗಿ ಸಮಾಜದ ಸಭಾಭವನ ನಿರ್ಮಾಣಕ್ಕೆ 50 ಲಕ್ಷ ಅನುದಾನವನ್ನು ನೀಡಲಾಗಿದೆ. ಹೆಚ್ಚುವರಿಯಾಗಿ ಬೇಕಿದ್ದರೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನೀಡಲಾಗುವುದು. ಶೀಘ್ರದಲ್ಲಿ ಈ ಸಮಾಜ ಭವನ ನಿರ್ಮಾಣವಾಗಲಿ ಎಂದು ಹಾರೈಸಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಮೇಲಕ್ಕೆ ಬರಬೇಕು ಯಾವುದೇ ಬೇಧಭಾವ ಬರಬಾರದು. ಶಿಕ್ಷಣದಲ್ಲಿ ನಿರಂತರವಾಗಿ ಸಾಧನೆ ಮಾಡುವಂತಾಗಬೇಕು. ಉತ್ತಮ ಶಿಕ್ಷಣ ಪಡೆದು ಸಮಾಜದ ಗಣ್ಯವ್ಯಕ್ತಿಯಾಗಿ ಬದುಕುಬೇಕು. ಸಮಾಜದ ಏಳಿಗೆಗೆ ಎಲ್ಲರೂ ಒಗ್ಗಟಾಗಿರಬೇಕು. ಹೀಗಿದ್ದಾಗ ಯಾವುದೇ ಸಮಸ್ಯೆ, ಕಷ್ಟ ಬಂದಾಗ ಅದನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ. ಹನಿ ಹನಿ ಗೂಡಿ ಹಳ್ಳ ಎಂಬಂತೆ ಎಲ್ಲರೂ ಒಗ್ಗಟಾಗಿದ್ದರೆ ಸಮಾಜವೂ ಬೆಳೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ಗುನಗಿ ಸಮಾಜದ ಮಹಿಳೆಯರು ಶಾಸಕರಿಗೆ ಉಡಿಯನ್ನು ನೀಡಿದರು. ಹಾಗೂ ಸಮಾಜದ ಗಣ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾರವಾರ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಸ್‌ ಗುನಗಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪ್ರಕಾಶ ಗುನಗಿ, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ‌ ಗುನಗಿ, ಸಮಾಜದ ಪ್ರಮುಖರಾದ ರಾಮದಾಸ ಗುನಗಿ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Ashika S

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

16 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

23 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

25 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

34 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

49 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

1 hour ago