News Karnataka Kannada
Friday, May 10 2024
ಉತ್ತರಕನ್ನಡ

ಕಾರವಾರ: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಶೆಟ್ಟರ್

Karwar: Shettar resigns as MLA
Photo Credit : News Kannada

ಕಾರವಾರ: ಬಿಜೆಪಿಯ ಹಿರಿಯ ಮುಖಂಡ, ಮಾಜಿ ಸಿಎಂ ಜಗದೀಶ ಶೆಟ್ಟರ ಅವರು ತಮ್ಮ ಶಾಸಕ ಸ್ಥಾನಕ್ಕೆ ರವಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಅವರಿಗೆ ಸಲ್ಲಿಸಿದರು.

ಜಗದೀಶ್‌ ಶೆಟ್ಟರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಶಿರಸಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಬಂದ ವೇಳೆ ಕಾಗೇರಿ ಅವರು ಸಂಧಾನಕ್ಕೆ ಮುಂದಾಗಿದ್ದರು. ತಮ್ಮ ಖಾಸಗಿ ಕೊಠಡಿಗೆ ಶೆಟ್ಟರ್‌ ಅವರನ್ನು ಕರೆದುಕೊಂಡು ಹೋಗಿ ಒಂದು ಗಂಟೆ ಕಾಲ ಚರ್ಚಿಸಿದರು. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಾಗೇರಿ ಅವರಿಗೆ ಕರೆ ಮಾಡಿ ಶೆಟ್ಟರ್‌ ಅವರ ಮನವೊಲಿಸಲು ಪ್ರಯತ್ನಪಟ್ಟರು ಎಂದು ತಿಳಿದುಬಂದಿದೆ.

ಆದರೆ, ಯಾವ ಸಂಧಾನಕ್ಕೂ ಶೆಟ್ಟರ್‌ ಒಪ್ಪಿಲ್ಲ. ಕೊನೆಗೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ ಅವರ ಕಚೇರಿಯಿಂದ ಹೊರ ಬಂದಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದೇನೆ. ಆದರೆ, ಇದನ್ನೆಲ್ಲ ಅರ್ಥಮಾಡಿಕೊಳ್ಳದೇ ಮೂಲ ಬಿಜೆಪಿಗರನ್ನು ಪಕ್ಷದಿಂದ ಹೊರಹಾಕಲಾಗುತ್ತಿದೆ. ಇದು ಮಾನಸಿಕವಾಗಿ ಬೇಸರ ತರಿಸಿದೆ. ಈಗ ನನ್ನ ಮನೆಯಿಂದಲೇ ನನ್ನ ಹೊರದಬ್ಬಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಬೇಸರ ವ್ಯಕ್ತಪಡಿಸಿದರು.

ನಾನು ದೊಡ್ಡ ಹುದ್ದೆಯ ಆಕಾಂಕ್ಷಿಯಾಗಿರಲಿಲ್ಲ. ವಯಸ್ಸಿದೆ, ಅನಾರೋಗ್ಯವಿಲ್ಲ, ಸಿಡಿ ವಿಚಾರ ಇಲ್ಲ. 30 ವರ್ಷದಿಂದ ಪಕ್ಷ ಕಟ್ಟಿದ್ದೇನೆ. ಪಕ್ಷದ ಬೆಳವಣಿಗೆಗೆ ಕೊಡುಗೆ ನೀಡಿದ್ದೇನೆ. ನನಗೆ ಶಾಸಕನಾಗಿ ಕೆಲಸ ಮಾಡೋ ಅವಕಾಶ ಕೊಟ್ಟರೆ ಸಾಕಿತ್ತು. ಆದರೆ ಯಾವುದೇ ಮುನ್ಸೂಚನೆ ಇಲ್ಲದೇ ಈ ರೀತಿ ಮಾಡಿದ್ದು ಬೇಸರ ತಂದಿದೆ ಎಂದರು.

ಯಾವ ತಪ್ಪು ಇದೆ ಎಂದು ನನಗೆ ಟಿಕೆಟ್‌ ತಪ್ಪಿಸಿದ್ರು ಇದು ಸರಿಯಲ್ಲ. ಈ ಬಗ್ಗೆ ರಾಜ್ಯ ನಾಯಕರು, ಪಕ್ಷದ ವರಿಷ್ಠರು ಸ್ಪಷ್ಟನೆ ನೀಡಲೇ ಇಲ್ಲ. ಬಿ ಎಸ್ ಯಡಿಯೂರಪ್ಪ ನನ್ನ ಪರವಾಗಿ ಮಾತನಾಡಿದ್ದರು. ಆದರೆ ಈಗ ಮೇಲಿನ ನಾಯಕರ ಕಾರಣದಿಂದ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಏಕೆ ಈ ಹಿಂದೆ ಕೆಜೆಪಿ ಸ್ಥಾಪನೆ ಮಾಡಿದ್ದರು ಎಂದು ಅವರು ಉತ್ತರಿಸಲಿ ಎಂದು ಶೆಟ್ಟರ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು