ಕಾರವಾರ: ಅತಿಕ್ರಮಣ ಜಾಗ ಸಕ್ರಮಕ್ಕೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಕ ಅತಿಕ್ರಮಣದಾರರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.
ಕಳೆದ ಎಂಟು ದಿನಗಳಿಂದ ಅತಿಕ್ರಣದಾರರು ನಗರದ ಡಿಸಿ ಕಚೇರಿಯಲ್ಲಿ ಧರಣಿಯನ್ನು ಕೈಗೊಂಡಿದ್ದಾರೆ. ಶಿರವಾಡದಲ್ಲಿ ಅತಿಕ್ರಮಣ ಮಾಡಿ ವಾಸಮಾಡುತ್ತಿರುವ ಜಾಗವನ್ನು ಸಕ್ರಮ ಮಾಡುವಂತೆ ಆಗ್ರಹಿಸಿ ಒತ್ತಾಯ ಮಾಡಲಾಗುತ್ತಿದೆ.
ಗುರುವಾರ ಕಾರವಾರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿದ ಧರಣಿ ನಿರತರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಎಲಿಷಾ ಎಲಕಪಾಟಿ ಅವರು ಸಚಿವರಿಗೆ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿದ ಸಚಿವರು ಈ ಬಗ್ಗೆ ಶೀಘ್ರವೇ ಕ್ರಮಕೈಗೊಳ್ಳಲಾಗುವುದು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಧರಣಿ ಮಾಡಿದವರ ಜೊತೆಗೆ ಮುಂದಿನಮ 10 ದಿನದಲ್ಲಿ ಸಭೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವ ಭವರಸೆಯನ್ನು ಸಚಿವರು ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ ಹಾಗೂ ಅಧಿಕಾರಿ ವರ್ಗದವರು ಇದ್ದರು.