ಕಾರವಾರ: ಭಾರತದಲ್ಲಿ ಭಾಗಶಃ ಸೂರ್ಯಗ್ರಹಣ ಗೋಚರ ಹಿನ್ನೆಲೆಯಲ್ಲಿ ಕಾರವಾರದ ಕಾಳಿ ಸೇತುವೆ ಬಳಿ ಗ್ರಹಣ ವೀಕ್ಷಣೆ ಮಾಡಲಾಯಿತು.
ಕಾರವಾರದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಸಾರ್ವಜನಿಕರಿಗೆ ಕಪ್ಪು ಕನ್ನಡಕವನ್ಮ ವಿವರಿಸಲಾಗಿತ್ತು.
ಅಲ್ಲದೇ ಟೆಲಿಸ್ಕೋಪ್ ಮೂಲಕವೂ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಶೇ.15ರಷ್ಟು ಮಾತ್ರ ಗ್ರಹಣ ಗೋಚರವಾಗಿದ್ದು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತಿ ಸಿಇಒ ಪ್ರಿಯಾಂಗಾ ಎಂ. ಸೇರಿದಂತೆ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಕುತೂಹಲದಿಂದ ಗ್ರಹಣ ವೀಕ್ಷಿಸಿದರು.