News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಮಳೆಗಾಲದಲ್ಲಿ ಪ್ರವಾಸಕ್ಕೆ ಬರುವವರ ಮುಂಜಾಗ್ರತಾ ಕ್ರಮಕ್ಕೆ ಎಸ್ಪಿ ಸೂಚನೆ

take precautionary measures during monsoon
Photo Credit :
ಕಾರವಾರ: ಕಡಲತೀರದಲ್ಲಿರುವ ಅಪಾಯಕಾರಿ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸುವ ಜೊತೆಗೆ ಕೆಲವೆಡೆ ನಿಷೇಧ ವಲಯವೆಂದು ಗುರುತಿಸುವಂತೆ ಕುಮಟಾ ತಾಲೂಕಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪೆನ್ನೇಕರ್ ಸೂಚಿಸಿದರು.
ರೆಸಾರ್ಟ್‌, ಹೋಟೆಲ್, ಹೋಮ್ ಸ್ಟೇಗಳ ಮಾಲೀಕರಿಗೆ ಈ ಬಗ್ಗೆ ಸೂಚನೆ ನೀಡಿದ ಅವರು ಮಳೆಗಾಲದ ಅವಧಿಯಲ್ಲಿ ಪ್ರವಾಸಕ್ಕೆಂದು ಆಗಮಿಸಿ, ಸಮುದ್ರದ ನೀರಿಗೆ ಇಳಿದು ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಳೆಗಾಲದಲ್ಲಿ ಸಮುದ್ರ ಒರಟಾಗಿರುತ್ತದೆ. ಈ ಕಾರಣಕ್ಕೆ ನೀರಿಗೆ ಇಳಿಯದಂತೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಆದೇಶವಿದ್ದರೂ, ಕೆಲ ಪ್ರವಾಸಿಗರು ನೀರಿಗೆ ಇಳಿಯುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ರೆಸಾರ್ಟ್, ಹೊಟೆಲ್ ಮತ್ತು ಹೋಂ ಸ್ಟೇ ಮಾಲೀಕರ ಸಭೆ ನಡೆಸಿ, ಮುಂಜಾಗ್ರತ ಕ್ರಮ ಕೈಗೊಳ್ಳಲು ಅಗತ್ಯ ಸಲಹೆ-ಸೂಚನೆ ನೀಡಲಾಗಿದೆ ಎಂದರು.
ರೆಸಾರ್ಟ್ ಮಾಲೀಕರು ಲೈಫ್ ಸೇಫ್ ಗಾರ್ಡ್ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಅಪಾಯ ಸ್ಥಳಗಳಲ್ಲಿ ನಾಮಫಲಕಗಳನ್ನು ಅಳವಡಿಸಬೇಕು. ಮೆಗಾ ಪೋನ್‌ಗಳ ಮೂಲಕ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಬೇಕು. ಲೈಫ್ ಜಾಕೆಟ್‌ಗಳನ್ನು ನೀಡಬೇಕು. ಕೆಂಪು ಬಣ್ಣದ ಧ್ವಜ ಹಾಕುವುದು ಸೇರಿದಂತೆ ಮತ್ತಿತರರ ಸೂಚನೆ ನೀಡಲಾಗಿದೆ. 3 ದಿನಗಳಲ್ಲಿ ಈ ಎಲ್ಲ ನಿಮಯಗಳನ್ನು ಪಾಲಿಸುತ್ತೇವೆ ಎಂದು ತಿಳಿಸಿದ್ದಾರೆ. ಕಂದಾಯ ಮತ್ತು ಪೊಲೀಸ್ ಇಲಾಖೆ ವತಿಯಿಂದ ಪರಿಶೀಲನೆ ನಡೆಸಲಾಗುತ್ತದೆ.  ಮುರ್ಡೇಶ್ವರ, ಗೋಕರ್ಣದ ಓಂ ಬೀಚ್ ಮತ್ತು ಕುಡ್ಲೆ ಬೀಚ್‌ಗಳಲ್ಲಿ ಲೈಫ್‌ಸೇಫ್ ಗಾರ್ಡ್ ಸಿಬ್ಬಂದಿಗಳಿದ್ದು, ಅವರು ಪ್ರವಾಸಿಗರು ನೀರಿಗೆ ಇಳಿಯದಂತೆ ಕ್ರಮ ವಹಿಸುತ್ತಿದ್ದಾರೆ ಎಂದರು.
ಉಪವಿಭಾಗಾಧಿಕಾರಿ ರಾಹುಲ್ ಪಾಂಡೆ, ತಹಸೀಲ್ದಾರ್ ವಿವೇಕ ಶೇಣ್ವಿ, ಪಿಐ ತಿಮ್ಮಪ್ಪ ನಾಯಕ, ಕುಮಟಾ ಪಿಎಸ್‌ಐ ನವೀನ ನಾಯ್ಕ ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು