ಕಾರವಾರ: ಜಿಲ್ಲೆಯಲ್ಲಿ ಪೌರ ಕಾರ್ಮಿಕರಿಗೆ ನೀಡುತ್ತಿರುವ ಸೌಲಭ್ಯಗಳು ಮತ್ತು ಬಾಕಿ ಉಳಿದಿರುವ ಕಾಮಗಾರಿಗಳನ್ನು ಮುಗಿಸಿ ಸಂಬಂಧಪಟ್ಟವರಿಗೆ ಶೀಘ್ರ ಹಸ್ತಾಂತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ಮಾಸ್ಟರ್ ಆರೋಗ್ಯ ತಪಾಸಣೆಯನ್ನು ವರ್ಷಕ್ಕೆ ಒಂದು ಬಾರಿ ಮತ್ತು ನಿಯಮಿತಿ ತಪಾಸಣೆಯನ್ನು ಪ್ರತಿ ಮೂರು ತಿಂಗಳಂತೆ ವರ್ಷಕ್ಕೆ ನಾಲ್ಕು ಬಾರಿ ಒಂದೇ ಕಾಲಮಿತಿಯೊಳಗೆ ಆಗುವ ಹಾಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ಅವಧಿಯಲ್ಲಿ ವೇತನವನ್ನು ಪಾವತಿಸುವಂತೆ ಹಾಗೂ ವೇತನಕ್ಕೆ ಸಂಬಂಧಿಸಿದ ದೂರುಗಳು ಬರೆದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ನಗರಸಭೆ ಆಯುಕ್ತ ಆರ್. ಪಿ. ನಾಯ್ಕ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಅಜ್ಜಪ್ಪ ಸೊಗದ, ಜಿಲ್ಲಾ ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕರಾದ ಸ್ಟೇಲ್ಲಾ ವರ್ಗೀಸ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.