ಕಾರವಾರ: ಮುದಗಾದಿಂದ ಕಾರವಾರದ ಮಧ್ಯೆ ಸಂಚರಿಸುವ ಬಸ್ನ ನಿರ್ವಾಹಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಮುಖಂಡ ರಾಘು ನಾಯ್ಕ ನೇತೃತ್ವದಲ್ಲಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಮುದಗಾದಿಂದ ಬರುತ್ತಿದ್ದ ಬಸ್ಗೆ ಬಿಣಗಾ ಬಳಿ ವಿದ್ಯಾರ್ಥಿಗಳು ಹತ್ತಿದ್ದಾರೆ. ಬಸ್ ಹತ್ತಿದ ಸಂದರ್ಭದಲ್ಲಿ ನಿರ್ವಾಹಕರು ನಮ್ಮನ್ನು ತಳ್ಳಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆಯಿತು.
ಸ್ಥಳದಲ್ಲಿದ್ದ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಕಾರವಾರ ಘಟಕದಲ್ಲಿರುವ ಬಸ್ಗಳು ಮತ್ತು ಚಾಲಕರ, ನಿರ್ವಾಹಕರ ಕೊರತೆಯನ್ನು ತಿಳಿಸಿ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಿದರು. ರಾಘು ನಾಯ್ಕ ಸ್ಥಳದಿಂದ ಡಿಪೋ ನಿರ್ವಾಹಕರಿಗೆ ಕರೆ ಮಾಡಿ, ಮುದಗಾ ಭಾಗದಿಂದ ಕಾರವಾರ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬರುತ್ತಿದ್ದರು. ಆ ಮಾರ್ಗದಲ್ಲಿ ಹೆಚ್ಚಿನ ಬಸ್ ಗಳನ್ನು ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.