News Karnataka Kannada
Thursday, May 02 2024
ಉತ್ತರಕನ್ನಡ

ಕಾರವಾರ: ವಿದ್ಯಾರ್ಥಿಗಳಿಂದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ

Students stage protest at bus stand
Photo Credit : By Author

ಕಾರವಾರ: ಮುದಗಾದಿಂದ ಕಾರವಾರದ ಮಧ್ಯೆ ಸಂಚರಿಸುವ ಬಸ್‌ನ ನಿರ್ವಾಹಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಮುಖಂಡ ರಾಘು ನಾಯ್ಕ ನೇತೃತ್ವದಲ್ಲಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮುದಗಾದಿಂದ ಬರುತ್ತಿದ್ದ ಬಸ್‌ಗೆ ಬಿಣಗಾ ಬಳಿ ವಿದ್ಯಾರ್ಥಿಗಳು ಹತ್ತಿದ್ದಾರೆ. ಬಸ್ ಹತ್ತಿದ ಸಂದರ್ಭದಲ್ಲಿ ನಿರ್ವಾಹಕರು ನಮ್ಮನ್ನು ತಳ್ಳಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆಯಿತು.

ಸ್ಥಳದಲ್ಲಿದ್ದ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಕಾರವಾರ ಘಟಕದಲ್ಲಿರುವ ಬಸ್‌ಗಳು ಮತ್ತು ಚಾಲಕರ, ನಿರ್ವಾಹಕರ ಕೊರತೆಯನ್ನು ತಿಳಿಸಿ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಿದರು. ರಾಘು ನಾಯ್ಕ ಸ್ಥಳದಿಂದ ಡಿಪೋ ನಿರ್ವಾಹಕರಿಗೆ ಕರೆ ಮಾಡಿ, ಮುದಗಾ ಭಾಗದಿಂದ ಕಾರವಾರ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬರುತ್ತಿದ್ದರು. ಆ ಮಾರ್ಗದಲ್ಲಿ ಹೆಚ್ಚಿನ ಬಸ್ ಗಳನ್ನು ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು