News Karnataka Kannada
Saturday, May 11 2024
ಉತ್ತರಕನ್ನಡ

ಕಾರವಾರ: ಕಬ್ಬು ಬೆಳೆಗಾರರು ಹೋರಾಟ ಹಿಂಪಡೆಯಿರಿ, ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ- ಸುನೀಲ ಹೆಗಡೆ

Karwar: Sugarcane growers should withdraw their agitation, there will be good news soon: Sunil Hegde
Photo Credit : By Author

ಕಾರವಾರ: ಸಕ್ಕರೆ ಆಯುಕ್ತರ ಸಭೆಯಿಂದಾಗಿ ಹಳಿಯಾಳದ ಕಬ್ಬು ಬೆಳೆಗಾರರ 18 ದಿನಗಳ ಹೋರಾಟ ಜಯದ ಹಂತಕ್ಕೆ ಬಂದು ತಲುಪಿದೆ. ಹೀಗಾಗಿ ಪ್ರತಿಭಟನೆ ಹಿಂಪಡೆದು ತಮ್ಮ ಕೆಲಸಗಳಿಗೆ ಮರಳಿ. ಮುಂದಿನ ದಿನಗಳಲ್ಲಿ ಆದಷ್ಟು ಬೇಗ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ ಎಂದು ಹಳಿಯಾಳದ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ.

ಇಲ್ಲಿ ಮಾತನಾಡಿದ ಅವರು, ಎಫ್‌ಆರ್‌ಪಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಿಂದ ನಿಗದಿಯಾಗುವುದು. ಈ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರದ ಗಮನಕ್ಕೆ ತಂದು, ಅಲ್ಲಿಂದ ನಿರ್ದೇಶನ ತೆಗೆದುಕೊಳ್ಳುವುದಾಗಿ ಆಯುಕ್ತರು ಕಾರವಾರದಲ್ಲಿ ನಡೆದ ಸಭೆಯಲ್ಲಿ ತಿಳಿಸಿದ್ದಾರೆ. ಎಫ್‌ಆರ್‌ಪಿಯಲ್ಲಿ ವ್ಯತ್ಯಾಸವಾದಾಗ ಎಸ್‌ಎಪಿಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ.

ಈ ಎಸ್‌ಎಪಿ ನಿಗದಿಗಾಗಿ ಅ.15ಕ್ಕೆ ಮುಖ್ಯಮಂತ್ರಿಗಳು, ಸಕ್ಕರೆ ಸಚಿವರೊಂದಿಗೆ ರೈತ ಮುಖಂಡರ ಸಭೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ಈ ವಿಚಾರ ಅಂತಿಮಗೊಳ್ಳಲಿದೆ ಎಂದು ಆಯುಕ್ತರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.ಮೋಸವಾಗುತ್ತಿದೆ ಎಂಬ ಸಂಶಯ ರೈತರದ್ದಾಗಿತ್ತು. ಎಚ್ ಆ್ಯಂಡ್ ಟಿ ಹೆಚ್ಚಾಗಿದೆ ಎಂದು ಆಯುಕ್ತರೂ ಒಪ್ಪಿಕೊಂಡಿದ್ದಾರೆ.

ಇಐಡಿ ಪ್ಯಾರಿ ಕಂಪನಿಯ ಹಳಿಯಾಳ, ರಾಮದುರ್ಗ, ಬಾಗಲಕೋಟ ಕಾರ್ಖಾನೆಗಳಲ್ಲಿನ ಎಚ್ ಆ್ಯಂಡ್ ಟಿಯನ್ನ ಆಡಿಟ್ ಮಾಡುತ್ತೇವೆ. ಸರ್ಕಾರದ ದರಕ್ಕಿಂತ ಹೆಚ್ಚಿಗೆ ಪಡೆದಿದ್ದರೆ ಅದನ್ನು ಮತ್ತೊಮ್ಮೆ ಮರು ಭರಣ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. ಎಫ್‌ಆರ್‌ಪಿ ದರ ಮರು ಪರಿಷ್ಕರಿಸಿ ಎಸ್‌ಎಪಿ ದರ ಕೊಟ್ಟು ರೈತರಿಗೆ ಹೆಚ್ಚಿನ ಬೆಲೆಯನ್ನು ಕೂಡಲೇ ನಿರ್ಧಾರ ಮಾಡಬೇಕು. ಎಚ್ ಆ್ಯಂಡ್ ಟಿ ಆಡಿಟ್ ರಿಪೋರ್ಟ್ ಶೀಘ್ರ ಪಡೆದು, ರೈತರಿಗೆ ಆದ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.ಯಾವುದೇ ವಸ್ತುವನ್ನು ಬಹಳ ಎಳೆದರೆ ಸರಿಯಾಗುವುದಿಲ್ಲ ಎಂಬುದನ್ನು ಹಳಿಯಾಳದಲ್ಲಿ ಪ್ರತಿಭಟನಾ ನಿರಂತರ ರೈತರು ಅರ್ಥ ಮಾಡಿಕೊಳ್ಳಬೇಕು. ರೈತರು ದೇಶಕ್ಕೆ ಅನ್ನ ಹಾಕುವವರು. ಅವರು ರಸ್ತೆಯ ಮೇಲೆ ಬಂದು ನಿಂತುಕೊಂಡರೂ ಸರಿ ಕಾಣುವುದಿಲ್ಲ. ಕೇಂದ್ರ- ರಾಜ್ಯ ಸರ್ಕಾರ ಯಾವತ್ತೂ ರೈತರ ಪರವಾಗಿರುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು