News Karnataka Kannada
Monday, May 06 2024
ಉತ್ತರಕನ್ನಡ

ಕಾರವಾರ: ತಹಸೀಲ್ದಾರ್ ಕಚೇರಿಯಲ್ಲಿ ಅಹವಾಲು ಸ್ವೀಕಾರ

Karwar
Photo Credit : By Author

ಕಾರವಾರ: ಹಿಂದಿನ ಸೋಮವಾರದ ಅಹವಾಲು ಸ್ವೀಕಾರದ ಕಾರ್ಯಕ್ರಮದಲ್ಲಿ 21 ಅರ್ಜಿಗಳು ಬಂದಿದ್ದು, ಅದರಲ್ಲಿ 19 ಅರ್ಜಿಗಳನ್ನು ಇತ್ಯರ್ಥಪಡಿಸಿ ದಾಖಲಾತಿಗಳನ್ನು ನೀಡಲಾಗಿದೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್‌. ನಾಯ್ಕ ಹೇಳಿದರು.

ಸೋಮವಾರ ತಹಸೀಲ್ದಾರ್ ಕಚೇರಿಯಲ್ಲಿ ಕಚೇರಿಯಲ್ಲಿ ನಡೆದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಳೆದ ವಾರ ಕಡವಾಡ ಹಾಗೂ ಗೋಟೆಗಾಳಿಯ ಗೋಯರದಲ್ಲಿ ಪಡಿತರ ವಿತರಣೆ ಸಮಸ್ಯೆ ಬಂದಿದ್ದು, ಅದನ್ನು ಇತ್ಯರ್ಥಪಡಿಸಲಾಗಿದೆ. ಪಡಿತರ ವಿತರಣೆ ಮಾಡಲಾಗುತ್ತಿದೆ. ಇನ್ನೂ ಇದೇ ರೀತಿ ಬೇರೆ ಬೇರೆ ಗ್ರಾಮಗಳಲ್ಲಿ ಈ ಬಗೆಯ ಸಮಸ್ಯೆಗಳಿದ್ದರೆ ಅದನ್ನು ಸರಿಪಡಿಸಬೇಕು ಎಂದು ತಹಸೀಲ್ದಾರರಿಗೆ ಹಾಗೂ ಆಹಾರ ನಿರೀಕ್ಷಕರಿಗೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸರ್ವರ್‌ಸಮಸ್ಯೆಯಿಂದ ಪಡಿತರ ವಿತರಣೆಯಲ್ಲಿ ತೊಂದರೆಯಾಗುತ್ತಿರುವುದನ್ನು ಗಮನಿಸಲಾಗಿದ್ದು, ಸರ್ವರ್‌‌ಸಮಸ್ಯೆ ಸರಿಪಡಿಸಬೇಕು. ಜನರಿಗೆ ಯಾವ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಜಮೀನಿಗೆ ಸಂಬಂಧಿಸಿದ ದಾಖಲೆ, ಜಮೀನು ಮೋಜಣಿ, ಪಹಣಿ ಪತ್ರ ತಿದ್ದುಪಡಿ, ಪಟ್ಟಾಗಳ ವಿತರಣೆ ಮಾಡುವ ಮಾಹಿತಿಯನ್ನು ತಯಾರಿಯಲ್ಲಿ ಇಟ್ಟುಕೊಳ್ಳುವಂತೆ ನಿರ್ದೇಶನ ನೀಡಲಾಗಿತ್ತು. ಅದರಂತೆ ಅವರು ಸಿದ್ದಪಡಿಸಿಕೊಂಡಿದ್ದಾರೆ. ಈ ಕಾರ್ಯಕ್ರಮವನ್ನು ದೀಪಾವಳಿ ಹಬ್ಬದ ನಂತರ ನಾನೇ ಖುದ್ದಾಗಿ ಪಂಚಾಯತಿವಾರು ವಿತರಣೆ ಮಾಡುವುದಾಗಿ ಹೇಳಿದರು.

ಜನರಿಗೆ ಅಗತ್ಯವಾಗಿರುವ ರೇಷನ್‌ಕಾರ್ಡ್‌, ಆಧಾರ್‌‌ಕಾರ್ಡ್‌, ಹೊಸ ವೋಟರ್‌ಐಡಿ ಕಾರ್ಡ್‌, ತಿದ್ದುಪಡಿಗಳನ್ನು ತ್ವರಿತವಾಗಿ ಮಾಡುವ ಕೆಲಸವಾಗಬೇಕು. ಗ್ರಾಮ ಚಾವಡಿಯಲ್ಲಿ ವಿಎಗಳು ಉಪಸ್ಥಿತರಿದ್ದು ಅಲ್ಲಿಯೇ ಸಮಸ್ಯೆ ಇತ್ಯರ್ಥಪಡಿಸಬೇಕು. ಅವರು ಇದಕ್ಕಾಗಿಯೇ ತಹಸೀಲ್ದಾರ್ ಕಚೇರಿಗೆ ಬರುತ್ತಾರೆ. ಜನರು ಅಲೆದಾಡುವುದನ್ನು ತಪ್ಪಿಸಿ ಸ್ಥಳದಲ್ಲಿಯೇ ನಿವಾರಣೆಯಾಗಬೇಕು ಎಂದು ಎಲ್ಲ ವಿಎಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ನಿಶ್ಚಲ ನರೋನ, ಪೌರಾಯುಕ್ತ ಆರ್‌.ಪಿ. ನಾಯ್ಕ, ಶಿರಸ್ತೆದಾರು, ವಿಎಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು