ಕಾರವಾರ: ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಎಟಿಎಂ ಯಂತ್ರ ಅಳವಡಿಕೆಗೆ ಮಾತುಕತೆ

ಕಾರವಾರ: ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಎಟಿಎಂ ಯಂತ್ರ ಅಳವಡಿಸುವ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಲೀಡ್ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಮಾತುಕತೆ ನಡೆಸಿದರು.

ಕಾರವಾರ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಕಂದಾಯ ಇಲಾಖೆಯ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿತಾಲೂಕಿನ ಗೋಪಶಿಟ್ಟಾದಲ್ಲಿ ಎಟಿಎಂ ಅವಶ್ಯಕತೆಯ ಬಗ್ಗೆ ಜನತೆ ಗಮನ ಸೆಳೆದಾಗ, ಶಾಸಕರು ದೂರವಾಣಿ ಮೂಲಕ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಮಾತನಾಡಿ, ಎಲ್ಲೆಲ್ಲಿ ಎಟಿಎಂ ಮಷಿನ್‌ ಅಳವಡಿಕೆ ಮಾಡಬಹುದು ಎಂದು ಪರಿಶೀಲಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಎಟಿಎಂ ಸ್ಥಾಪಿಸಿ ಸಾರ್ವಜನಿಕರಿಗೆ ಬ್ಯಾಂಕುಗಳ ವ್ಯವಹಾರಕ್ಕೆ ಅನುಕೂಲ ಕಲ್ಪಿಸುವ ಕುರಿತು ಚರ್ಚಿಸಿದರು.

ಹಿಂದಿನ ಸಾರ್ವಜನಿಕ ಅಹವಾಲು ಸ್ವೀಕಾರದಲ್ಲಿ ಸುಮಾರು 13 ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 9 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಕೊಂಕಣ ರೈಲು ತಮ್ಮ ಟಿಕೇಟ್‌ ಕಾಯ್ದಿರಿಸುವ ಪತ್ರಿಕೆಯಲ್ಲಿ ಕೇವಲ ಹಿಂದಿ ಹಾಗೂ ಇಂಗ್ಲೀಷ್‌ ಭಾಷೆಗಳನ್ನು ಬಳಸಿದ್ದಾರೆ. ಕರ್ನಾಟಕದಲ್ಲಿ ಕನ್ನಡವನ್ನು ಬಳಸಿ ಟಿಕೆಟ್ ಕಾಯ್ದಿರಿಸುವ ಕ್ರಮವಾಗಬೇಕು ಎಂದು ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಉತ್ತರಿಸಿ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷರಾದ ಪಿ.ಪಿ‌.ನಾಯ್ಕ, ತಹಶೀಲ್ದಾರ ಎನ್‌.ಎಫ್‌. ನರೋನ, ಪೌರಾಯುಕ್ತರಾದ ಆರ್.ಪಿ.ನಾಯ್ಕ, ಪಿಡಬ್ಲುಡಿ ಎಇಇ, ಕಂದಾಯ ಇಲಾಖೆ ಸಿಬ್ಬಂದಿ, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ ಗುನಗಿ, ಮುಖಂಡರಾದ ರಾಜೇಶ ನಾಯ್ಕ, ಸಾರ್ವಜನಿಕರು ಉಪಸ್ಥಿತರಿದ್ದರು.

Sneha Gowda

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

30 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

32 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

56 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago