News Karnataka Kannada
Friday, May 10 2024
ಉತ್ತರಕನ್ನಡ

ಕಾರವಾರ: ಕೆ.ಡಿ.ಸಿ.ಸಿ ಬ್ಯಾಂಕ್ ನ 102 ನೇ ವಾರ್ಷಿಕ ಸರ್ವಸಾಧಾರಣ ಸಭೆ

Karwar: The 102nd Annual General Meeting of KDCC Bank at its office hall in Karwar
Photo Credit : By Author

ಕಾರವಾರ: ಕಾರ್ಮಿಕ ಖಾತೆ ಸಚಿವರು ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷ ಶಿವರಾಮ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕೆ.ಡಿ.ಸಿ.ಸಿ ಬ್ಯಾಂಕ್ ನ ಪ್ರಧಾನ ಕಚೇರಿ ಸಭಾಂಗಣದಲ್ಲಿ ಬ್ಯಾಂಕ್ ನ 102 ನೇ ವಾರ್ಷಿಕ ಸರ್ವಸಾಧಾರಣ ಸಭೆ ಶಿರಸಿಯಲ್ಲಿ ನಡೆಯಿತು.

ಜಿ.ಎಸ್.ಹೆಗಡೆ ಅಜ್ಜೀಬಳ ಸಹಕಾರ ಪ್ರಶಸ್ತಿ ಯನ್ನು ಸಹಕಾರಿ ಸೀತಾರಾಮ ಭಟ್ಟ ಇಟಗಿ ಅವರಿಗೆ ಹಾಗೂ ಸಹಕಾರಿ ಸಿಬ್ಬಂದಿ ಗಣಪತಿ ಹೆಗಡೆ ಗುಣವಂತೆ ಅವರಿಗೆ ಬ್ಯಾಂಕಿನ ಅಧ್ಯಕ್ಷ ಶಿವರಾಮ ಹೆಬ್ಬಾರ್ ಅವರು ಪ್ರಧಾನ ಮಾಡಿದರು. ಸುಂದರರಾವ ಪಂಡಿತ ಪ್ರಶಸ್ತಿಯನ್ನು ಇಡಗುಂದಿ ಸೇವಾ ಸಹಕಾರಿ ಸಂಘಕ್ಕೆ ಪ್ರದಾನ ಮಾಡಲಾಯಿತು.

ತಾಲೂಕಾ ಮಟ್ಟದ ೧೨ ಉತ್ತಮ ಪ್ರಾಥಮಿಕ ಸಹಕಾರಿ ಸಂಘಗಳಿಗೆ ಪ್ರಶಸ್ತಿ ನೀಡಲಾಯಿತು. ನೂರಕ್ಕೆ ನೂರು ಸಾಲ ವಸೂಲಿ ಮಾಡಿದ ೫ ಪ್ರಾಥಮಿಕ ಸಹಕಾರಿ ಸಂಘಗಳನ್ನು ಹಾಗೂ ೯ ವಿವಿಧ ವರ್ಗಗಳ ಉತ್ತಮ ಕೃಷಿಯೇತರ ಸಹಕಾರಿ ಸಂಘಗಳನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯಕ, ನಿರ್ದೇಶಕರಾದ ಜಿ.ಆರ್.ಹೆಗಡೆ ಸೋಂದಾ, ಆರ್.ಎಂ.ಹೆಗಡೆ ಬಾಳೇಸರ, ರಾಘವೇಂದ್ರ ಶಾಸ್ತ್ರಿ, ಎಲ್.ಟಿ.ಪಾಟೀಲ, ಕೃಷ್ಣ ದೇಸಾಯಿ, ಪ್ರಕಾಶ ಗುನಗಿ, ಶಿವಾನಂದ ಹೆಗಡೆ ಕಡತೋಕ, ವ್ಯವಸ್ಥಾಪಕರ ನಿರ್ದೇಶಕರು, ಸದಸ್ಯರು ಸೇರಿ ಹಲವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು