News Karnataka Kannada
Monday, May 06 2024
ಉತ್ತರಕನ್ನಡ

ಕಾರವಾರ: ಡಿಸೆಂಬರ್ ಅಂತ್ಯದೊಳಗೆ ಆಯುಷ್ಮಾನ್ ಕಾರ್ಡ್ ವಿತರಿಸಿ ಎಂದ ಡಾ. ಕೆ. ಸುಧಾಕರ

Sudhakar
Photo Credit : By Author

ಕಾರವಾರ: ಜಿಲ್ಲೆಯಲ್ಲಿ ಈಗಾಗಲೇ ಆಯುಷ್ಮಾನ ಕಾರ್ಡ್ಗಳನ್ನು ನೀಡಲಾಗುತ್ತಿದ್ದು, ಡಿಸೆಂಬರ ಅಂತ್ಯದೊಳಗೆ ಜಿಲ್ಲೆಯಲ್ಲಿನ ಎಲ್ಲ ಜನ ಸಾಮಾನ್ಯರಿಗೂ ಆಯುಷ್ಮಾನ್ ಕಾರ್ಡ್ ವಿತರಣೆಯಾಗುವಂತೆ ಜಿಲ್ಲಾಧಿಕಾರಿ ಗಮನಹರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಸಭಾಭವನದಲ್ಲಿ ಮಂಗಳವಾರದAದು ಆರೋಗ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಈಗಾಗಲೇ ಒಟ್ಟು ೨ ಲಕ್ಷದ ೭೫ ಸಾವಿರ ಜನರು ಆಯುಷ್ಮಾನ ಯೋಜನೆಯಡಿಯಲ್ಲಿ ಪ್ರಯೋಜನ ಪಡೆದುಕೊಂಡಿದ್ದು, ಜನಸಾಮಾನ್ಯರು ಸ್ವಯಂ ಪ್ರೇರಣೆಯಿಂದ ಆಯುಷ್ಮಾನ್ ಕಾರ್ಡಗಳನ್ನು ತುರ್ತು ಸಂದರ್ಭದಲ್ಲಿ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿನ ಎಲ್ಲ ತಾಲೂಕಾ ಆಸ್ಪತ್ರೆಗಳಲ್ಲಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಡ್ಡಾಯವಾಗಿ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಬೇಕು ಹಾಗೂ ಜಿಲ್ಲೆಯಲ್ಲಿ ಶೇ.೩೦ ರಿಂದ ೪೦ ಪ್ರತಿ ಶತದಷ್ಟು ಸಿ ಸೆಕ್ಷನ್ ಹೆರಿಗೆಯಾಗುವುದನ್ನು ಕಡಿಮೆ ಮಾಡಬೇಕು ಎಂದು ಅಧಿಕಾರಿಗಳಿಗೆ ಎಂದು ಸೂಚಿಸಿದರು.

ಜಿಲ್ಲೆಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯಲ್ಲಿ ಮೂರು ಹಂತದ ಚಿಕಿತ್ಸೆಗಳನ್ನು ನೀಡಲಾಗುತ್ತಿದ್ದು, ತೃತಿಯ ಹಂತದ ಸೇವೆಯನ್ನು ಉತ್ಕೃಷ್ಟವಾಗಿ ನೀಡಲು ಬೇಕಾಗುವಂತಹ ಉಪಕರಣಗಳನ್ನು ಸ್ಥಳದಲ್ಲಿಯೇ ಮಂಜುರು ಮಾಡಲಾಗಿದೆ ಎಂದು ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಜಿಲ್ಲೆಗೆ ತುರ್ತು ಸೇವಾ ಕೆಂದ್ರವನ್ನು ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಬಿಸಾಗುವುದು, ನಂತರ ಕುಮಟಾ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಮಲ್ಟಿ ಸ್ಪೇಶಾಲಿಟಿ ಆಸ್ಪತ್ರೆಗೆ ಸ್ಥಳ ಪರಿಶೀಲನೆ ನಡೆಸಿ, ಸ್ಥಳ ನಿಗದಿಯಾದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು ನೀಡಿಕಾಮಗಾರಿ ಪ್ರಾರಂಭಿಸಲಾಗುವುದು. ಸರ್ಕಾರದ ವತಿಯಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಉತ್ಕೃಷ್ಟವಾದ ಆರೋಗ್ಯ ಸೇವೆಯನ್ನು ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್, ಜಿಲ್ಲಾ ಪಂಚಾಯತ ಮುಖ್ಯಕಾರ್ಯ ನಿರ್ವಾಹಕಅಧಿಕಾರಿ ಪ್ರೀಯಾಂಗಾ ಎಂ, ಭಾರತೀಯ ಆಡಳಿತ ಸೇವೆ, ಅಧಿಕಾರಿ ಡಿ. ರಂದೀಪ, ಕುಮಟಾ ವಿಧಾನ ಸಭೆ ಶಾಸಕ ದಿನಕರ ಶೆಟ್ಟಿ, ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು