ಕಾರವಾರ: ಬಾವಿಯಲ್ಲಿ ರಿಂಗ್ ರಿಪೇರಿ ಮಾಡುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಯಲ್ಲಾಪುರದ ಮಾವಿನಕಟ್ಟಾ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಗೋವಿಂದ ಪೂಜಾರಿ(60), ಗಣೇಶ ಶೇಟ್ (23), ಸುರೇಶ ನಾಯ (40) ಮೃತಪಟ್ಟವರಾಗಿದ್ದಾರೆ. ಓರ್ವ ವ್ಯಕ್ತಿ ಮೊದಲು ಪಂಪ್ ರಿಪೇರಿಗೆ ಎಂದು ಬಾವಿಗೆ ಇಳಿಸಿದ್ದು, ಈ ವೇಳೆ ಆತ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದ ಎನ್ನಲಾಗಿದೆ. ಬಳಿಕ ಆತ ಬಿದ್ದಿರುವುದನ್ನ ನೋಡಿದ ಇನ್ನೋರ್ವ ವ್ಯಕ್ತಿ ಮುಳುಗಡೆಯಾಗಿದ್ದವ ರಕ್ಷಣೆಗೆ ಎಂದು ನೀರಿಗೆ ಇಳಿದಿದ್ದ ಇವರು ಸಹ ನೀರಿನಲ್ಲಿ ಮುಳುಗಡೆ ಆಗಿರುವುದನ್ನ ಗಮನಿಸಿದ ಮೂರನೆ ವ್ಯಕ್ತಿ ಸಹ ಅವರಿಬ್ಬರ ರಕ್ಷಣೆಗಾಗಿ ಬಾವಿಗೆ ಹಾರಿದ್ದು, ಈ ವೇಳೆ ಮೂವರು ಸಹ ಒಬ್ಬರಿಗೆ ಒಬ್ಬರೂ ರಕ್ಷಣೆ ಮಾಡಲಾಗದೆ ಬಾವಿಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಾಗಿದೆ.
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…
ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…
ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.
ಬಿಗ್ಬಾಸ್ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…
ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.