News Karnataka Kannada
Tuesday, April 30 2024
ಉತ್ತರಕನ್ನಡ

ಕಾರವಾರ: 3 ಮೂರು ತಿಂಗಳಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂವರು ಅಧಿಕಾರಿಗಳ ವರ್ಗಾವಣೆ

Three officials of mines and geology department transferred in three months
Photo Credit : By Author

ಕಾರವಾರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಉಪನಿರ್ದೇಶಕರಾಗಿ ಪ್ರಭಾರ ಹುದ್ದೆ ವಹಿಸಿಕೊಂಡಿದ್ದ ಮೋಹನ್ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ.

ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಉಪನಿರ್ದೇಶಕರಾಗಿದ್ದ ಸೋಮಶೇಖರ್ ಎನ್ನುವವರನ್ನು ಬಾಗಲಕೋಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿತ್ತು. ಇದಾದ ನಂತರ ಇಲಾಖೆಯ ಭೂ ವಿಜ್ಞಾನಿಯಾಗಿದ್ದ ಜಯರಾಮ್ ನಾಯ್ಕ ಎನ್ನುವವರಿಗೆ ಉಪನಿರ್ದೇಶಕ ಹುದ್ದೆಯ ಪ್ರಭಾರ ನೀಡಲಾಗಿತ್ತು. ಈ ನಡುವೆ ಧಾರವಾಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಹಿರಿಯ ಭೂ ವಿಜ್ಞಾನಿಯಾಗಿದ್ದ ಮೋಹನ್ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಪ್ರಭಾರ ನೀಡಿ ಆದೇಶಿಸಲಾಗಿತ್ತು. ಬುಧವಾರ ಮತ್ತೆ ಅವರಿಗೆ ನೀಡಿದ ಪ್ರಭಾರವನ್ನೂ ರದ್ದು ಮಾಡಿ ಜಯರಾಮ್ ಅವರಿಗೆ ನೀಡಿದ್ದು, ಮೋಹನ್ ಅವರಿಗೆ ಧಾರವಾಡಕ್ಕೆ ವರ್ಗಾಯಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆ ಇನ್ನಿತರ ಅಕ್ರಮ ಚಟುವಟಿಕೆಗಳು ನಡೆಯುತ್ತಿದೆ ಎನ್ನುವ ಆರೋಪವಿದೆ. ಇದಲ್ಲದೇ ಸದ್ಯ ಮರಳುಗಾರಿಕೆ ಬಂದಾಗಿರುವ ಹಿನ್ನಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಅಗತ್ಯತೆ ಹೆಚ್ಚಾಗಿರುತ್ತದೆ. ಆದರೆ ಮೂರೇ ತಿಂಗಳಲ್ಲಿ ಇಬ್ಬರನ್ನು ವರ್ಗಾವಣೆ ಮಾಡಿರುವುದು ಇದೀಗ ಜಿಲ್ಲೆಯ ಜನರಲ್ಲಿ ಹಲವು ಸಂಶಯಕ್ಕೆ ಕಾರಣವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು