News Karnataka Kannada
Saturday, May 04 2024
ಉತ್ತರಕನ್ನಡ

ಕಾರವಾರ: ಸ್ವಾತಂತ್ರ್ಯ ನಂತರ ಭವ್ಯ ಭಾರತ ನಿರ್ಮಾಣಕ್ಕೆ ಡಾ.‌ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ

Karw
Photo Credit : By Author

ಕಾರವಾರ: ಸ್ವಾತಂತ್ರ್ಯ ನಂತರ ಭವ್ಯ ಭಾರತ ನಿರ್ಮಾಣಕ್ಕೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಿದೆ ಎಂದು ಉಪನ್ಯಾಸಕಿ ಡಾ. ಭಾಗ್ಯಶ್ರಿ ನಾಯಕ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ನಗರದ ಶಿವಾಜಿ ಬಿ.ಎಡ್ ಕಾಲೇಜಿನಲ್ಲಿ ಆಯೋಜಿಸಿದ್ದ ಡಾ. ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಬಗ್ಗೆ ಓದು ಮುಗಿಯದ ಪುಸ್ತಕ ಎಂದರು.

ಅಂಬೇಡ್ಕರ್ ಅವರು ಬೃಹತ್ ಕಣಜ ಇದ್ದಂತೆ. ಯಾವ ವಿಚಾರವೂ ಗೊತ್ತಿಲ್ಲ ಎನ್ನದ ವ್ಯಕ್ತಿ ಅಂಬೇಡ್ಕರ್ ಆಗಿದ್ದರು. ಭಾರತದ ಅಭಿವೃದ್ದಿಗೆ ಸಂವಿಧಾನದ ಕೊಡುಗೆಯೇ ಅಪಾರ. ಸಮಾನತೆಯನ್ನ ಹೋಗಿಸಲು ಅವರು ಪಟ್ಟ ಶ್ರಮ‌ಎಲ್ಲರೂ ನೆನೆಯಬೇಕು ಎಂದರು. ಅಂಬೇಡ್ಕರ್ ಮಾನವತಾವಾದಿಗಳಾಗಿದ್ದರು. ಅವರ ಸಂವಿಧಾನದಿಂದಲೇ ಹಿಂದು ಅಸ್ಪೃಶ್ಯತೆ ನಿವಾರಣೆಯಾಗಿ ದಲಿತರು, ತುಳಿತಕ್ಕೊಳಗಾಗಿದವರು, ಹಿಂದುಳಿದವರು ಮೇಲಕ್ಕೆ ಬಂದಿದ್ದಾರೆ. ಮಹಿಳೆಯ ಏಳಿಗೆಗೆ ಬಾಬಾ ಸಾಹೇಬರ ಕೊಡುಗೆ ಅಪಾರ ಎಂದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪತ್ರಕರ್ತ ಸಂದೀಪ್ ಸಾಗರ್ ಮಾತನಾಡಿ ಅಂಬೇಡ್ಕರ್ ಎಂದರೆ ದಲಿತರು, ಮೀಸಲಾತಿ ಅನ್ನುವ ಕಲ್ಪನೆಯನ್ನ ಬಿಡಬೇಕು. ಎಲ್ಲಾ ವರ್ಗದ ಏಳಿಗೆಗೆ ಅಂಬೇಡ್ಕರ್ ಅವರ ಕೊಡುಗೆ ಇದೆ ಎಂದರು. ಸಮಾಜದಲ್ಲಿ ಶೋಷಿತಕ್ಕೊಳಗಾದ ಸಮಾಜ ಇಂದು ಉನ್ನತ ಹಂತಕ್ಕೆ ಹೋಗುತ್ತಿದೆ ಎಂದರೆ ಅದು ಅಂಬೇಡ್ಕರ್ ಕಾರಣ. ಅಸಮಾನತೆ ಹೋಗಬೇಕು. ಅಸಮಾನತೆ ಹೆಚ್ಚಾದರೆ ದೇಶದ ಪ್ರಗತಿ ಮೇಲೂ ಪರಿಣಾಮ ಬೀರಲಿದ್ದು ಶಿಕ್ಷಕರಾಗುವವರು ಮುಂದೆ ವಿದ್ಯಾರ್ಥಿಗಳಿಗೂ ಅಂಬೇಡ್ಕರ್ ಆದರ್ಶಗಳನ್ನ ತಿಳಿಸಿ ಪಾಲಿಸುವಂತೆ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.‌ಶಿವಾನಂದ ನಾಯಕ ಮಾತನಾಡಿ ಅಂಬೇಡ್ಕರ್ ಹುಟ್ಟದೇ ಇದ್ದಿದ್ದರೆ ಗುಲಾಮಗಿರಿ ಇನ್ನು ಇರುತ್ತಿತ್ತು. ದೇಶಕ್ಕೆ ಸಂವಿಧಾನವನ್ನ ಬರೆದ ಅಂಬೇಡ್ಕರ್ ದೀಪವಾಗಿ ಬೆಳಕನ್ನು ನೀಡಿದರು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ. ಶಿವಕುಮಾರ ನಾಯಕ, ನವೀನ್ ದೇವರಭಾವಿ, ಸುಮನ್ ಸಾವಂತ್, ಮಾದವಿ ಗಾಂವಕರ್, ರಾಜೇಶ್ ಭಂಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು.‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು