ಕಾರವಾರ: ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಸುಂಕಸಾಳ ಬಳಿ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಕೋಲ್ ತುಂಬಿಕೊಂಡು ಹೊರಟಿದ್ದ ಮತ್ತು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಮಾರ್ಗವಾಗಿ ಕರ್ಜೂರ ತುಂಬಿಕೊಂಡು ಬರುತ್ತಿದ್ದ ಲಾರಿಗಳ ನಡುವೆ ಅಪಘಾತ ಸಂಭವಿಸಿದೆ.
ಕೋಲ್ ತುಂಬಿದ ಲಾರು ಸಂಪೂರ್ಣ ಹೆದ್ದಾರಿ ಮೇಲೆ ಉರುಳಿ ಬಿದ್ದು ಹೆದ್ದಾರಿ ತುಂಬಾ ಕೋಲ್ ಬಿದ್ದಿದೆ. ಹಾಗೆ ಕರ್ಜೂರವು ರಸ್ತೆ ಮೇಲೆ ಚೆಲ್ಲಾಪಿಲಿಯಾಗಿ ಬಿದ್ದಿದೆ. ಈ ಅಪಘಾತದಿಂದ ಹೆದ್ದಾರಿ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಬಳಿಕ ಸ್ಥಳಕ್ಕೆ ಅಂಕೋಲಾ ಪೊಲೀಸರು ಆಗಮಿಸಿ ಲಾರಿಯನ್ನು ತೆರವು ಮಾಡಿ ಸಂಚಾರಕ್ಕೆ ಸಹಕರಿಸಿದರು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.