News Karnataka Kannada
Friday, May 17 2024
ಉತ್ತರಕನ್ನಡ

ಕಾರವಾರ: ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಬಂಧನ

Karwar: Two accused, who were involved in several cases and were absconding, have been arrested.
Photo Credit : By Author

ಕಾರವಾರ: ಉತ್ತರ ಕನ್ನಡ ಹಾಗೂ ಹೊರ ಜಿಲ್ಲೆಗಳಲ್ಲಿ ಅಪರಾಧ ಕೃತ್ಯಗಳನ್ನು ನಡೆಸಿ ಪೋಕ್ಸೋ, ಅಕ್ರಮ ಜಾನುವಾರು ಸಾಗಾಟ, ಗಾಂಜಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಖತರ್ನಾಕ್ ಅಂತರಾಜ್ಯ ಖದೀಮರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು 10 ತಂಡಗಳಾಗಿ ಮಂಗಳವಾರ ಭಟ್ಕಳದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಟ್ಕಳ ತಾಲೂಕಿನ ಬಿಲಾಲಖಂಡದ ಅಕ್ರಮ ಸಯ್ಯದ ಮೊಹಮ್ಮದ ಹುಸೇನ್ (20) ಹಾಗೂ ಗೋಪಾಲಕೃಷ್ಣ ರೋಡ್‌ನ ನಿವಾಸಿ ಮೊಹಮ್ಮದ ಇಮ್ರಾನ್ ಮೊಹಮ್ಮದ ಬಾಷಾ ಶೇಖ(33) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿ ಅಕ್ರಮ ಸಯ್ಯದ ಈತನು ಭಟ್ಕಳ ಶಹರ ಪೊಲೀಸ್ ಠಾಣೆ, ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ, ಗಾಂಜಾ ಸಾಗಾಟ, ಮನೆಕಳ್ಳತನ ಮತ್ತು ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ ಹಾಗೂ ಉಡುಪಿ ಜಿಲ್ಲೆಯಲ್ಲಿ ಪೊಕ್ಸೋ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದನು.

ಇನ್ನು ಆರೋಪಿ ಮೊಹಮ್ಮದ ಇಮ್ರಾನ್ ಈತನು ಭಟ್ಕಳ ಶಹರ ಪೊಲೀಸ್ ಠಾಣೆ, ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ, ಗಾಂಜಾ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದನು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು