ಕಾರವಾರ: ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ಭಾವಿಕೇರಿಯಲ್ಲಿ ಸಂಭವಿಸಿದೆ.
ಭಾವಿಕೇರಿ ನಿವಾಸಿ ಮಧುಕರ ನಾಯಕ (58) ಮತ್ತು ಶಾಂತಾರಾಮ ನಾಯಕ (58) ಮೃತಪಟ್ಟವರಾಗಿದ್ದಾರೆ. ಮಧುಕರ ನಾಯಕ ಅವರ ಹಳೆಯ ಮನೆಯ ಗೋಡೆ ತೆರುವುಗೊಳಿಸಿಲು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಗೋಡೆ ಕುಸಿದು ಬಿದ್ದ ಪರಿಣಾಮವಾಗಿ ಮಣ್ಣಿನ ಅಡಿಯಲ್ಲಿ ಸಿಲುಕಿ ಗಂಭೀರ ಸ್ಥಿತಿಯಲ್ಲಿ ಇದ್ದವರನ್ನು ಮಂಗಳೂರು ಆಸ್ಪತ್ರೆಗೆ ಒಯ್ಯುವಾಗ ಒಬ್ಬ ಕುಮಟಾ ಮಿರ್ಜಾನ ಬಳಿ, ಇನ್ನೊಬ್ಬ ಕುಂದಾಪುರದ ಬೈಂದೂರು ಬಳಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಂಕೋಲಾ
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.