ಕಾರವಾರ: ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಸಿ ತಾಲೂಕಿನ ಎಸಳೆ ಕೆರೆಯಲ್ಲಿ ಶನಿವಾರ ನಡೆದಿದೆ.
ಮೃತರನ್ನು ಅಹ್ಮದ್ ರಾಜಾ ಜನ್ನಿಗೇರಿ (14) ಮತ್ತು ಕಾಸಿಮ್ ರಿಯಾಜ್ (14) ಎಂದು ಗುರುತಿಸಲಾಗಿದೆ. ಅವರಿಬ್ಬರೂ ಕಸ್ತೂರಬಾ ನಗರದ ನಿವಾಸಿಗಳು.
ಪೊಲೀಸರು ಮತ್ತು ಅಗ್ನಿಶಾಮಕ ದಳದವರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಯಿತು.