ಕಾರವಾರ: ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹಟ್ಟಿ ಗೋರ್ಲ್ಡ್ ಮೈನ್ಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿ ಆದೇಶ ಮಾಡಿದೆ. ಮುಲ್ಲೈ ಮುಗಿಲನ್ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡೆ, ಯುವ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದ ಮುಲ್ಲೈ ಮುಗಿಲನ್ ಅವರು ಜನಸಾಮಾನ್ಯರ ಜಿಲ್ಲಾಧಿಕಾರಿ ಎಂದು ಪ್ರಸಿದ್ಧಿಯಾಗಿದ್ದರು. ಜಿಲ್ಲೆಯಲ್ಲಿ ಪ್ರವಾಹ, ನೆರೆ ಬಂದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಪ್ರವಾಹ ಪೀಡಿತ ಸ್ಥಳಗಳಿಗೆ ಹೋಗಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದರು.