ಕಾರವಾರ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್. ವಿಜಯ ಕುಮಾರ್ ಅವರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಧ್ವಜಾರೋಹಣವನ್ನು ನೆರವೇರಿಸಿದರು.
ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭೂಮಿಯನ್ನು ಇನ್ನೊಬ್ಬರಿಂದ ಪಡೆದು ಕೇವಲ ಅದರ ಗಡಿಯನ್ನು ಗುರುತಿಸುವುದು ಸ್ವಾತಂತ್ರ ಆಗುವುದಿಲ್ಲ. ಬದಲಾಗಿ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ನ್ಯಾಯಯುತವಾಗಿ ದೊರಕಿಸಿಕೊಡುವುದು ಆಗಿದೆ ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಾಜಿ ಅನಂತ್ ನಾಲವಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅರವಿಂದ್ ಜಿ. ನಾಯಕ್, ಹಿರಿಯ ವಕೀಲ ಎಸ್. ಪಿ.ಕಾಮತ್, ಆರ್ ಎಸ್ ಹೆಗಡೆ ಗಾಳಿ, ಎ.ಆರ್. ಬಿ. ಡಿಸೋಜ ಹಾಗೂ ರಾಜೇಶ್ವರಿ ವಿ. ನಾಯ್ಕ ಇವರುಗಳು ಸ್ವಾತಂತ್ರ್ಯದ ಅಮೃತಮಹೋತ್ಸವ ಮತ್ತು ಹರ್ ಘರ್ ತಿರಂಗ ಅಭಿಯಾನದ ಕುರಿತು ಮಾತನಾಡಿದರು ಮಾತನಾಡಿದರು.
ವೇದಿಕೆಯಲ್ಲಿ ಸಿಜೆಎಂ ನ್ಯಾಯಾಧೀಶ ರೇಷ್ಮಾ ರೋಡ್ರಗೀಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ. ರಾಯ್ಕರ್, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ದರಗದ್, ಪ್ರಧಾನ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ್ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅಕ್ಷತಾ ಸಿ. ಆರ್. ಹಾಗೂ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎಂ.ಎಲ್. ನಾಯ್ಕ ಅವರು ಇದ್ದರು. ವಕೀಲರಾದ ಬಿ. ಜಯಂತಿ ಇವರು ದೇಶಭಕ್ತಿ ಗೀತೆಯನ್ನು ಹಾಡಿದರು.
ಜಿಲ್ಲಾ ನ್ಯಾಯಾಲಯದ ಶಿರಸ್ತೇದಾರ ನಾಗರಾಜ್ ವಿ. ನಾಯ್ಕ ಅವರು ಸ್ವಾಗತಿಸಿ, ನಿರೂಪಿಸಿದರು. ನ್ಯಾಯಾಲಯದ ಸಿಬ್ಬಂದಿ ಪದ್ಮರಾಜ್ ವಿ. ನಾಯ್ಕ ವಂದಿಸಿದರು. ಈ ಸಂದರ್ಭದಲ್ಲಿ ಹಿರಿಯ ಕಿರಿಯ ವಕೀಲರು ಜಿಲ್ಲಾ ಸರ್ಕಾರಿ ವಕೀಲರು, ಅಭಿಯೋಜನಾ ಇಲಾಖೆಯ ಅಧಿಕಾರಿಗಳು, ನ್ಯಾಯಾಲಯದ ಸಿಬ್ಬಂದಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳು, ವಿವಿಯ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.