ಕಾರವಾರ: ರೂಪಾಲಿ ನಾಯ್ಕ ಪ್ರಯತ್ನದಿಂದ ದೇವಾಲಯಗಳ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆ

ಕಾರವಾರ: ಶಾಸಕಿ ರೂಪಾಲಿ ಎಸ್.ನಾಯ್ಕ ಅವರ ವಿಶೇಷ ಪ್ರಯತ್ನದಿಂದ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ 27 ದೇವಾಲಯಗಳ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದೆ.

ಈ ಹಿಂದೆ ಕ್ಷೇತ್ರದ ದೇವಾಲಯಗಳ ಅಭಿವೃದ್ಧಿಗೆ 7 ಕೋಟಿ ರೂ. ಬಿಡುಗಡೆಯಾಗಿತ್ತು. ಇದೀಗ 5 ಕೋಟಿ ರೂ. ಬಿಡುಗಡೆಯಾಗಿದೆ. ಇದರಿಂದ ಕ್ಷೇತ್ರದ ದೇವಾಲಯಗಳ ಅಭಿವೃದ್ಧಿಗೆ 12 ಕೋಟಿ ರೂ. ಬಿಡುಗಡೆಯಾದಂತಾಗಿದೆ.

ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ದೇವಾಲಯಗಳ ಅಭಿವೃದ್ಧಿಗೆ ಇಷ್ಟೊಂದು ಅನುದಾನವನ್ನು ಶಾಸಕರು ತಂದಿರುವುದು ಗಮನಾರ್ಹವಾಗಿದೆ.

ಇದೀಗ ಬಿಡುಗಡೆಯಾದ 5 ಕೋಟಿ ರೂ.ಗಳಲ್ಲಿ ಕೈಗೊಳ್ಳುವ ದೇವಾಲಯಗಳ ವಿವರ ಈ ಕೆಳಗಿನಂತಿದೆ. ಅಂಕೋಲಾ ಕಣಕಣೇಶ್ವರ ದೇವಸ್ಥಾನ 35 ಲಕ್ಷ ರೂ, ತೋಡುರು ಗೋವಿಂದ ದೇವಸ್ಥಾನ 25 ಲಕ್ಷ ರೂ, ಕಾರವಾರ ಅಳ್ವೆವಾಡದ ನರಸಿಂಹ ದೇವಸ್ಥಾನ ಅಭಿವೃದ್ಧಿ 25 ಲಕ್ಷ ರೂ, ಶೆಟಗೇರಿ ಹಡವ ದೇವಸ್ಥಾನ ಅಭಿವೃದ್ಧಿ 15 ಲಕ್ಷ ರೂ, ಅಮದಳ್ಳಿ ಮಹಾಸತಿ ದೇವಸ್ಥಾನ ಅಭಿವೃದ್ಧಿ 50 ಲಕ್ಷ ರೂ, ಚೆಂಡಿಯಾ ಅಂಬಾಭವಾನಿ ದೇವಸ್ಥಾನ ಅಭಿವೃದ್ಧಿ 21 ಲಕ್ಷ ರೂ, ಅಂಕೋಲಾ ಶಡಗೇರಿ ಕಾಳಮ್ಮದೇವಸ್ಥಾನ ಅಭಿವೃದ್ಧಿ 25 ಲಕ್ಷ ರೂ, ಶಿರವಾಡ ದೇವತಿ ದೇವಸ್ಥಾನ ಅಭಿವೃದ್ಧಿ 25 ಲಕ್ಷ ರೂ, ಬೊಬ್ರುವಾಡ ತೆಂಕಣಕೇರಿ ವೆಂಕಟರಮಣ ದೇವಸ್ಥಾನ ಅಭಿವೃದ್ಧಿ 10 ಲಕ್ಷ ರೂ, ಬೊಬ್ರುವಾಡ ಬೊಬ್ರು ದೇವಸ್ಥಾನ ಅಭಿವೃದ್ಧಿ 6 ಲಕ್ಷ ರೂ, ಹಾರವಾಡ ದುರ್ಗಾದೇವಿ ದೇವಸ್ಥಾನ ಅಭಿವೃದ್ಧಿ 50 ಲಕ್ಷ ರೂ, ಹಿಲ್ಲೂರಬೈಲ್ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿ10 ಲಕ್ಷ ರೂ, ಬೆಳಸೆ ದುರ್ಗಾದೇವಿ ದೇವಸ್ಥಾನ ಅಭಿವೃದ್ಧಿ 30 ಲಕ್ಷ ರೂ, ಸಗಡಗೇರಿ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನ ಅಭಿವೃದ್ಧಿ 15 ಲಕ್ಷ ರೂ, ಶಿರ್ವೆ ಶ್ರೀ ನಾರಾಯಣ ದೇವಸ್ಥಾನ ಅಭಿವೃದ್ಧಿ 25 ಲಕ್ಷ ರೂ, ಬರಗಲ್ ಶ್ರೀ ಮಹಾದೇವ ದೇವಸ್ಥಾನ ಅಭಿವೃದ್ಧಿ 10 ಲಕ್ಷ ರೂ, ಉಳಗಾ ಶ್ರೀ ನಾರಾಯಣ ಮಹಾದೇವ ದೇವಸ್ಥಾನ ಅಭಿವೃದ್ಧಿ 5 ಲಕ್ಷ ರೂ, ಅಸ್ನೋಟಿ ಶ್ರೀ ಕಾಮಾಕ್ಷೀ ರಾಜೇಶ್ವರ ಗಣಪತಿ ದೇವಸ್ಥಾನ ಅಭಿವೃದ್ಧಿ 5 ಲಕ್ಷ ರೂ, ಮಲ್ಲಾಪುರ ಶ್ರೀ ಮಹಾದೇವ ದೇವಸ್ಥಾನ ಅಭಿವೃದ್ಧಿ 10 ಲಕ್ಷ ರೂ, ಬಾಳ್ನಿ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನ ಅಭಿವೃದ್ಧಿ 10 ಲಕ್ಷ ರೂ, ಅಂಕೋಲಾ ಪುರಸಭೆ ವ್ಯಾಪ್ತಿಯ ವಿಠ್ಠಲ ಸದಾಶಿವ ದೇವಾಲಯ ಅಭಿವೃದ್ಧಿ 10 ಲಕ್ಷ ರೂ, ಕೇಣಿ ದತ್ತಾತ್ರೇಯ ದೇವಾಲಯ ಅಭಿವೃದ್ಧಿ 15 ಲಕ್ಷ ರೂ, ಕಾರವಾರ ನಗರಸಭೆ ವ್ಯಾಪ್ತಿಯ ರಾಘವೇಂದ್ರ ಮಠ ಅಭಿವೃದ್ಧಿ 10 ಲಕ್ಷ ರೂ, ಮಂಜಗುಣಿ ಗ್ರಾಮದ ಶ್ರೀ ವಿನಾಯಕ ದೇವಸ್ಥಾನ ತಾರಿಜಟಕ ದೇವಸ್ಥಾನ ಅಭಿವೃದ್ಧಿ 15 ಲಕ್ಷ ರೂ, ದೇವಳಮಕ್ಕಿ ಶ್ರೀ ನಾರಾಯಣ ಮಹದೇವ ದೇವಾಲಯ ಅಭಿವೃದ್ಧಿ 10 ಲಕ್ಷ ರೂ, ಅಂಕೋಲಾ ಪುರಸಭೆ ವ್ಯಾಪ್ತಿಯ ಕಾನಮ್ಮ ದೇವಾಲಯ ಅಭಿವೃದ್ಧಿ 28 ಲಕ್ಷ ರೂ ಹಾಗೂ ಚಿತ್ತಾಕುಲ ದೇವಬಾಗ ನರಸಿಂಹ ದೇವಸ್ಥಾನ ಅಭಿವೃದ್ಧಿ (ಅಂಬಿಗ ಸಮಾಜ) 5 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶಿಸಿದೆ.

ಈಗಾಗಲೆ ಬಿಡುಗಡೆಯಾದ ಅನುದಾನದ ಬಹುತೇಕ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದ್ದಾರೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago