ಕಾರವಾರ: ಹಳ್ಳ ದಾಟುವಾಗ ನೀರಿನ ರಬಸಕ್ಕೆ ಬುಡಕಟ್ಟು ಸಮುದಾಯದ ಮಹಿಳೆಯೋರ್ವಳು ಕೊಚ್ಚಿ ಹೋಗಿರುವ ಘಟನೆ ಅಂಕೋಲಾ ತಾಲೂಕಿನ ಹಳವಳ್ಳಿ ಬಾಳೆಗದ್ದೆ ನಡೆದಿದೆ.
ಕಮಲಾ ಗಣಪತಿ ಸಿದ್ದಿ (50) ನೀರಲ್ಲಿ ಕೊಚ್ಚಿ ಹೋದ ಮಹಿಳೆ. ಗದ್ದೆಗೆ ತೆರಳಿ ವಾಪಸ್ ಬರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಳೆ. ಸ್ಥಳದಲ್ಲಿ ಮಹಿಳೆಯ ಸೀರೆ ಹಾಗೂ ಬ್ಯಾಗ್ ಪತ್ತೆಯಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರು ಹಾಗೂ ಪೋಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.