ಕಾರವಾರ: ಸಾಹಿತಿಗಳನ್ನು ಸಾಹಿತ್ಯದ ಪರಿಮಿತಿಯಲ್ಲಿ ನೋಡಬೇಕು ಎಂದ ಡಾ.ರಾಮಕೃಷ್ಣ ಗುಂದಿ

ಕಾರವಾರ: ಧರ್ಮಕ್ಕೆ ಕಟ್ಟುಬೀಳದೆ ಸಾಹಿತ್ಯದ ಸಂವೇದನೆಯ ಒಲವು ಮೂಡಿಸಿಕೊಂಡರೆ ಎಲ್ಲವೂ ಪರಿಪೂರ್ಣವಾಗುತ್ತದೆ. ಸಾಹಿತಿಗಳನ್ನು ಜಾತಿ, ಮತದ ಪರಿಮಿತಿಯಲ್ಲಿ ನೋಡದೆ ಸಾಹಿತ್ಯದ ಪರಿಮಿತಿಯಲ್ಲಿ ನೋಡಬೇಕು ಎಂದು ನಿವೃತ್ತ ಪ್ರಾಚಾರ್ಯ, ಸಾಹಿತಿ ಡಾ. ರಾಮಕೃಷ್ಣ ಗುಂದಿ ಹೇಳಿದರು.

ನಗರದ ಜಿಲ್ಲಾರಂಗಮಂದಿರ (ದಿ. ಪ್ರಭಾಕರ್ ರಾಣೆ ವೇದಿಕೆ)ದಲ್ಲಿ ನಡೆದ 7ನೇ ಕಾರವಾರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ  ಮಾತನಾಡಿದ ಅವರು ಸಾಹಿತ್ಯದ ಮನಸ್ಸುಗಳಿಗೆ ಕೊರತೆ ಇಲ್ಲ. ಆದರೆ ಯುವ ಸಾಹಿತ್ಯದ ಮನಸ್ಸುಗಳಿಗೆ ಕೊರತೆ ಇದೆ ಎಂದು  ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿ, ಚುನಾವಣೆಗೂ ಮೊದಲು ನೀಡಿದ ಭರವಸೆಯಂತೆ ಸಾಹಿತ್ಯ ಪರಿಷತ್ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಾಧಕರ ಮನೆಗೆ ಸಾಹಿತ್ಯ ಪರಿಷತ್, ಶಾಲೆಗಳತ್ತ ಸಾಹಿತಿಗಳು, ಸಾಹಿತ್ಯದಲ್ಲಿ ಯಕ್ಷಗಾನ, ಕನ್ನಡದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹೀಗೆ ಸಾಹಿತ್ಯದ ಬೆಳವಣಿಗೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಹಿತ್ಯ ಪರಿಷತ್ ಅನ್ನು ಜನಸಾಮಾನ್ಯರ ಸಾಹಿತ್ಯ ಪರಿಷತ್ನ್ನಾಗಿ ಮಾಡಲಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಪ್ರಾಸ್ತಾವಿಕ ಭಾಷಣ ಮಾಡುವ ಸಂದರ್ಭದಲ್ಲಿ ಕನ್ನಡ ಶಾಲೆಗಳ ಸ್ಥಿತಿಯನ್ನು ಸಭೆಗೆ ತಿಳಿಸುವಾಗ ಅವರು ಗದ್ಗದಿತರಾದರು. ಉಮ್ಮಳಿಸಿ ಬಂದ ದುಃಖವನ್ನು ತಡೆದುಕೊಂಡು ಮಾತು ಮುಂದುವರಿಸಿದರು. ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಗಡಿಭಾಗದ ಶಾಲೆಗಳಿಗೆ ಹೋಗಿದ್ದೆ. ಶಾಲೆಗಳಿಗೆ ಉತ್ತಮವಾದ ಕಟ್ಟಡಗಳಿಗೆ ಆದರೆ, ವಿದ್ಯಾರ್ಥಿಗಳಿಲ್ಲ. ಒಂದೊಂದು ಶಾಲೆಯಲ್ಲಿ 6, 7, 8 ವಿದ್ಯಾರ್ಥಿಗಳ ಸಂಖ್ಯೆಗಳಿವೆ. ಗಡಿಯಲ್ಲಿ ಕನ್ನಡಕ್ಕೆ ಬಂದಿರುವ ಸ್ಥಿತಿಯನ್ನು ಕಂಡು ನೋವು ಎನಿಸಿತು ಎಂದರು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

4 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

5 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

5 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

6 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

6 hours ago