ಕಾರವಾರ: ಯಕ್ಷಗಾನ ಕಲಾವಿದ ಕುಮಟಾ ತಾಲೂಕಿನ ಧಾರೇಶ್ವರದ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಈ ಮೂಲಕ ಜಿಲ್ಲೆಯ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದಂತಾಗಿದೆ.
ಕಳೆದ ಅನೇಕ ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸುಬ್ರಮಣ್ಯ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿದ್ದು ಜಿಲ್ಲೆಗೆ ಹರ್ಷದ ಸಂಗತಿಯಾಗಿದೆ. ಅವರ ವಿದ್ಯಾಭ್ಯಾಸವು ಪ್ರಥಮ ಪಿಯುಸಿಗೆ ಆಗಿದೆ. ಆಮೇಲೆ ಹೊಟ್ಟೆಪಾಡಿಗಾಗಿ ಎಲೆಕ್ಟ್ರಿಕ್ ಕೆಲಸ ಕಲಿತರು. ಯಕ್ಷಗಾನದ ಭಾಗವತರಾದ ಅವರ ಅದೇ ಕ್ಷೇತ್ರದಲ್ಲಿ ಮಿಂಚಿದರು.
ಸಂಗೀತಗಾರನಾಗಬೇಕೆಂದಿದ್ದ ಸುಬ್ರಮಣ್ಯ ಅವರಿಗೆ ಯಕ್ಷಗಾನದ ಭಾಗವತನಾಗಬೇಕಾದ ಸ್ಥಿತಿ ಬಂತು. ದಿ.ಕಾಳಿಂಗ ನಾವುಡ, ಚಿಟ್ಟಾಣಿ ರಾಮಚಂದ್ರ ಹೆಗಡೆ, ದಿ. ದುರ್ಗಪ್ಪ ಗುಡಿಗಾರರು ನನಗೆ ಉತ್ತಮ ಅವಕಾಶಗಳನ್ನು ನೀಡುತ್ತ ನನ್ನ ಬೆಳವಣಿಗೆಗೆ ಕಾರಣರಾದರು.
ವಿಭಿನ್ನತೆಯನ್ನು ಬಯಸುವ ಮನಸ್ಸು ಸುಬ್ರಮಣ್ಯ ಅವರದ್ದಾಗಿತ್ತು. ಸಂಗೀತಗಾರನಾಗುವ ಕನಸನ್ನು ಇಟ್ಟುಕೊಂಡು ಯಕ್ಷಗಾನದಲ್ಲೂ ಸಂಗೀತದ ರುಚಿಯನ್ನು ಕಾಣತೊಡಗಿದರು . ಹೃದಯಕ್ಕೆ ಹತ್ತಿರವಿರುವ ಪೌರಾಣಿಕ ಪ್ರಸಂಗಗಳು ಅನಿವಾರ್ಯವಾಗಿ ಕಡಿಮೆ ಆಗುತ್ತ ಬಂದವು. ಜನ ಬಯಸುವ ಪ್ರಸಂಗಗಳನ್ನು ನೀಡಬೇಕಾದ ಸ್ಥಿತಿ ನಿರ್ಮಾಣವಾಯಿತು. ಸಾಮಾಜಿಕ ಪ್ರಸಂಗಗಳು ಕಿಸೆಗೆ ಹತ್ತಿರವಾಯಿತು. ಅವರು ಮಾಡಿದ ಪ್ರಯೋಗಗಳನ್ನು ಜನ ಒಪ್ಪಿಕೊಂಡರು. ಅಷ್ಟರದಲ್ಲಿ ಯಕ್ಷಗಾನದಲ್ಲಿ ಒಂದು ಹಂತಕ್ಕೆ ಬೆಳೆದಿದ್ದೇನೆ. ಕಳೆದ ವರ್ಷ ಶ್ಯಾಮಲಾ ಭಾವೆ ಅವರ ಶಿಷ್ಯನಾಗಿ ಸಂಗೀತ ಕಲಿಯಲು ಪ್ರಾರಂಭಿಸಿದ್ದಾರೆ.
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…
ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…
ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…