ಕಾರವಾರ: ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ಮಾಹಿತಿ ತಿದ್ದುಪಡಿ ಸಂಬಂದಿಸಿದಂತೆ ಚುನಾವಣಾ ಆಯೋಗವು ಪ್ರಮುಖವಾಗಿ ಮೂರು ಪ್ರಕಾರದ ನಮೂನೆಗಳನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯಾದ್ಯಂತ ಈ ನಮೂನೆ ಹಾಗೂ ಪತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿನೂತನ ಮಾದರಿಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಅರಿವು ಮೂಡಿಸಲು ಮುಂದಾಗಬೇಕು ಎಂದು ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಪ್ರಿಯಾಂಗಾ ಎಂ ಅವರು ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತ್ನ ಆವರಣದಲ್ಲಿರುವ ಕೇಸ್ವಾನ್ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮಗಳ ಆಯೋಜನೆ ಕುರಿತು ಸೋಮವಾರ ಜರುಗಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ವಿಶೇಷ ಚೇತನರು, ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು, ಹಿರಿಯ ನಾಗರಿಕರು, ಬುಡಕಟ್ಟು ಜನಾಂಗದವರು ಸೇರಿದಂತೆ ವಿವಿಧ ವಿಶೇಷ ವರ್ಗದವರನ್ನು ಮತದಾರರ ಗುರುತಿನ ಪಟ್ಟಿಯಲ್ಲಿ ನೊಂದಾಯಿಸಲು ಅಧಿಕಾರಿಗಳು ಕ್ರಮವಹಿಸಬೇಕಿದೆ. ಜೊತೆಗೆ ಪ್ರಮುಖವಾಗಿ ಪ್ರಸ್ತುತ ಎಲ್ಲಾ ಚುನಾವಣಾ ಮತದಾರರ ಚೀಟಿಯ ನಂಬರ್ನ್ನು ಆಧಾರ್ ಸಂಖ್ಯೆಗೆ ಜೋಡಿಸು ಪ್ರಕ್ರಿಯೆಗೂ ಮುಂದಾಗಬೇಕು. ಈ ನಿಟ್ಟಿನಲ್ಲಿ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸ್ವೀಪ್ ಸಮಿತಿ ರಚಿಸಿಕೊಂಡು ಮತದಾರರ ಜಾಗೃತಿ ಕಾರ್ಯಕ್ರಮಗಳ ಆಯೋಜನೆಗೆ ನಿಗಾವಹಿಸಬೇಕು ಎಂದರು.
ಶಾಲಾ-ಕಾಲೇಜು ಹಂತದಲ್ಲಿ ಮತದಾರರ ನೋಂದಣಿ ಕುರಿತು ಅರಿವು ಮೂಡಿಸುವುದರ ಜೊತೆಗೆ 18 ವರ್ಷ ಮೇಲ್ಪಟ್ಟ ಎಲ್ಲರ ಹೆಸರನ್ನು ನೋಂದಣಿ ಮಾಡಿಸಿ ಈ ಮಾಹಿತಿಯನ್ನು ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ಗೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ವಿವಿಧ ಬಗೆಯ ಸ್ವಿಪ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅಲ್ಲದೇ ಜಿಲ್ಲೆಯಲ್ಲಿನ ಸ್ವ-ಸಹಾಯ ಸಂಘಗಳ ಮಹಿಳೆಯರ ನೋಂದಣಿ ಅಥವಾ ಹೆಸರು ತಿದ್ದುಪಡಿಯಾಗುವಂತವರ ಮಾಹಿತಿಯನ್ನು ಎನ್ಆರ್ಎಲ್ಎಂ ಸಿಬ್ಬಂದಿ ನೀಡಬೇಕು.ಪ್ರತಿ ಗ್ರಾಮ ಪಂಚಾಯತಿಯ ಕಸ ಸಂಗ್ರಹ ವಾಹನದಲ್ಲಿ ಮತದಾನ ನೋಂದಣಿ ಕುರಿತಾದ ಜಿಂಗಲ್ಸ್ಗಳ ಮೂಲಕ ಪ್ರಚಾರ ಮಾಡಬೇಕು.
ಜಿಲ್ಲೆಯಲ್ಲಿರುವ ಯುವಕ ಸಂಘಗಳಲ್ಲಿನ ಯುವಕರನ್ನು ಸೇರಿಸಿಕೊಂಡು ಮತದಾನ ನೊಂದಣಿ ಜೊತೆಗೆ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ನಡೆಯುವಂತಹ ಜನ ಸಂದಣಿಯ ಜಾತ್ರೆ, ವಾರದ ಸಂತೆ, ಬಸ್ ನಿಲ್ದಾಣ, ಸರಕಾರಿ ಕಚೇರಿಗಳು, ಶಾಲಾ-ಕಾಲೇಜು ಆವರಣದಲ್ಲಿ ಬ್ಯಾನರ್ ಮತ್ತು ಹೋಲ್ಡಿಂಗ್ಸ್ ಅಳವಡಿಸಬೇಕು.
ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಹಾಗೂ ಮತದಾರರ ಗುರುತಿನ ಚೀಟಿ ತಿದ್ದುಪಡಿ, ಹೆಸರು ನೋಂದಣಿ ಬಗ್ಗೆ ವಿಶೇಷ ಶಿಬಿರಗಳನ್ನು ಆಯೋಜಿಸಬೇಕು. ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಸ್ವೀಪ್ ಕಾರ್ಯಕ್ರಮದಡಿ ಮತದಾನ ಜಾಗೃತಿ ಬಗ್ಗೆ ಹಮ್ಮಿಕೊಂಡ ವಿವಿಧ ಕಾರ್ಯಕ್ರಮಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಬೇಕು. ತಾಲೂಕಾ ನೋಡಲ್ ಅಧಿಕಾರಿಗಳಾದ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸ್ವೀಪ್ ಕಾರ್ಯಕ್ರಮದಡಿ ಜರುಗುವ ಜಾಗೃತಿ ಜಾಥಾ, ಶಿಬಿರ, ಸ್ಪರ್ಧಾ ಚಟುವಟಿಕೆಗಳ ಸಮಗ್ರ ವರದಿಯನ್ನು ಜಿಲ್ಲಾ ಪಂಚಾಯತ್ಗೆ ಸಲ್ಲಿಸಬೇಕು ಎಂದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರು, ನರೇಗಾ ಐಇಸಿ ಸಂಯೋಜಕರು, ಸಿಬ್ಬಂದಿ ಇದ್ದರು.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…