News Karnataka Kannada
Saturday, May 04 2024
ಉತ್ತರಕನ್ನಡ

ಕೊಲ್ಲೂರು: ವಸತಿ ಗೃಹದಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಗೊಂಡು ಯಾತ್ರಾರ್ಥಿ ಸಾವು

Kolluru
Photo Credit : By Author

ಕೊಲ್ಲೂರು: ಉಸಿರಾಟದ ಸಮಸ್ಯೆ ಉಲ್ಬಣಗೊಂಡು ಯಾತ್ರಾರ್ಥಿಯೊಬ್ಬರು ಮೃತಪಟ್ಟ ಘಟನೆ ಕೊಲ್ಲೂರಿನ ವಸತಿಗೃಹವೊಂದರಲ್ಲಿ ಡಿ.31ರಂದು ನಡೆದಿದೆ.

ಮೃತರನ್ನು ಕೇರಳ ಮೂಲದ 72ವರ್ಷದ ಕೆ.ಪಿ. ವಲ್ಸನ್ ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಸ್ನೇಹಿತರೊಂದಿಗೆ ಡಿ.30 ರಂದು ರಾತ್ರಿ ಕಾರಿನಲ್ಲಿ ಕೇರಳದಿಂದ ಕೊಲ್ಲೂರಿಗೆ ಬಂದಿದ್ದು, ಕೊಲ್ಲೂರು ಶ್ರೀಮೂಕಾಂಬಿಕಾ ದೇವರ ದರ್ಶನ ಪಡೆದು ಬಳಿಕ ಡಿ.31ರಂದು ಮಹಾಲಕ್ಷ್ಮೀ ರೆಸಿಡೆನ್ಸಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ಜ.1ರಂದು ಬೆಳಿಗ್ಗೆ ವಲ್ಸನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಉಸಿರಾಟ ಸಮಸ್ಯೆ ಉಲ್ಬಣಗೊಂಡು ಅಸ್ವಸ್ಥಗೊಂಡಿದ್ದರು. ತಕ್ಷಣ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ವಲ್ಸನ್ ಅವರು ದಾರಿ ಮದ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು