ಕುಮಟಾ: ಎನ್ ಸಿಸಿ ರಾಷ್ಟ್ರೀಯ ಶಿಬಿರದಲ್ಲಿ ಭಾಗವಹಿಸಿ ತರಬೇತಿ ಪಡೆದ ಕೆಡೆಟ್ ಗಳು

ಕುಮಟಾ: ಡಾ. ಎ.ವಿ ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎನ್‌ಸಿಸಿ ನೆವೆಲ್ ವಿಭಾಗದ ಇಬ್ಬರು ಕೆಡೆಟ್ ಗಳು ರಾಷ್ಟ್ರೀಯ ಎನ್ ಸಿಸಿ ಶಿಬಿರದಲ್ಲಿ ಭಾಗವಹಿಸಿ ತರಬೇತಿ ಪಡೆದುಕೊಂಡಿದ್ದಾರೆ.
ನೆವೆಲ್ ವಿಭಾಗದ ಎಲ್ ಡಿ ಕೆಡೆಟ್ ಅರುಣ್ ಗೌಡ ಕೊಚ್ಚಿಯಲ್ಲಿ ಜು. 3 ರಿಂದ ಜು. 7 ರವರೆಗೆ ನಡೆದ ಸಮುದ್ರದ ಬಾಂಧವ್ಯ ರಾಷ್ಟ್ರೀಯ ಶಿಬಿರದಲ್ಲಿ  ಭಾಗವಹಿಸಿದ್ದರು. ಈ ವೇಳೆ ಕೆಡೆಟ್‌ಗಳಿಗೆ ಯುದ್ಧನೌಕೆ ಕಾರ್ಯಾಚರಣೆ, ನ್ಯಾವಿಗೇಷನ್, ಸಂವಹನ, ಗನ್‌ರಿ, ಸೀಮನ್‌ಶಿಪ್ ಇತ್ಯಾದಿ‌ ವಿಷಯಗಳ ಬಗ್ಗೆ ತರಬೇತಿ ನೀಡಲಾಗಿದೆ.
ಇನ್ನು ಮೇ 17 ರಿಂದ ಮೇ 26 ರವರೆಗೆ ಮತ್ತು ಜೂ. 8 ರಿಂದ ಜೂ. 17 ರವರೆಗೆ ಬೆಂಗಳೂರಿನಲ್ಲಿ ನಡೆದ ಎನ್ ಸಿಸಿ ರಾಜ್ಯ ಮಟ್ಟದ ಶೂಟಿಂಗ್ ಚಾಂಪಿಯನ್‌ಶಿಪ್ ಶಿಬಿರದ ಮಹಿಳಾ ವಿಭಾಗದಲ್ಲಿ ಎಲ್‌ಡಿ ಕೆಡೆಟ್ ಸಹನಾ ನಾಯಕ್ ಭಾಗವಹಿಸಿದ್ದರು. ಈ ವೇಳೆ ನಡೆದ ಶೂಟಿಂಗ್ ಚಾಂಪಿಯನ್‌ಶಿಪ್ ನ ಇಂಟರ್ ಗುಂಪು ಸ್ಪರ್ಧೆಯಲ್ಲಿ ಪ್ರತಿನಿಧಿಸಿದ್ದ ಸಹನಾ ಮೂರನೇ ಸ್ಥಾನದೊಂದಿಗೆ ಕಂಚಿನ ಪದಕ ಪಡೆದಿದ್ದಾಳೆ.
ಇನ್ನು ಕೆಡೆಟ್ ಗಳ ಸಾಧನೆಗೆ ಎನ್ ಸಿಸಿ 8 ಕರ್ನಾಟಕ ನೌಕಾ ಘಟಕದ ಕಮಾಂಡರ್ ಸತ್ಯನಾಥ ಭೋಸ್ಲೆ, ಪ್ರಾಚಾರ್ಯ ಡಾ.ಎಸ್.ವಿ. ಗಾಂವ್ಕರ್ ಮತ್ತು ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ವಿ.ಆರ್. ಶಾನಭಾಗ್ ಕೆಡೆಟ್‌ಗಳ ಸಾಧನೆಗೆ ಅಭಿನಂದಿಸಿದ್ದಾರೆ.
Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago