ಕುಮಟಾ: ತಾಲೂಕಿನ ಮಿರ್ಜಾನ್ ಬಳಿ ಅಪರೂಪದ ಜಿಲ್ಲೆಯಲ್ಲಿ ಈವರೆಗೂ ಪತ್ತೆಯಾಗದ ಬಿಳಿ ಹೆಬ್ಬಾವು ಪತ್ತೆಯಾಗಿದೆ. ಮಿರ್ಜಾನಿನ ರಾಮನಗರ ನಿವಾಸಿ ಸುಬ್ರಹ್ಮಣ್ಯ ಅವರ ಮನೆಯ ಬಳಿ ಈ ಬಿಳಿ ಹೆಬ್ಬಾವು ಪತ್ತೆಯಾಗಿದೆ.
ಉರಗ ತಜ್ಞ ಪವನ್ ನಾಯ್ಕ ಸ್ಥಳಕ್ಕೆ ಬಂದು ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಪವನ್ ನಾಯ್ಕ ಮಾಹಿತಿಯಂತೆ ಈ ಹೆಬ್ಬಾವು ಬೇರೆಯ ಜಾತಿಯ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ನ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ.
ರಾಜ್ಯದಲ್ಲಿ ಪತ್ತೆಯಾದ 2 ನೇ ಬಿಳಿ ಬಣ್ಣದ ಹೆಬ್ಬಾವು ಇದಾಗಿದೆ. ಹೆಬ್ಬಾವನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು.