News Karnataka Kannada
Saturday, May 04 2024
ಉತ್ತರಕನ್ನಡ

ಕುಂದಾಪುರ: ಆಂಬುಲೆನ್ಸ್, ಲಾರಿ, ಟಿಪ್ಪರ್ ನಡುವೆ ಸರಣಿ ಅಪಘಾತ

A series of accidents between an ambulance, a lorry and a tipper
Photo Credit : By Author

ಕುಂದಾಪುರ: ವಯೋವೃದ್ಧ ರೋಗಿಯನ್ನು ಆಂಬುಲೆನ್ಸ್ ನಲ್ಲಿ ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕೋಟೇಶ್ವರ ಸಮೀಪದ ಬೀಜಾಡಿ ಪೂಜಾ ಮಾರ್ಬಲ್ ಯೂಟನರ್ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಂಬುಲೆನ್ಸ್ ಹಾಗೂ ಲಾರಿ ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತಗೊಂಡು 3 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ನಡೆದಿದೆ.

ಕೋಟೇಶ್ವರ ಸಮೀಪದ ವಕ್ವಾಡಿಯಿಂದ ವಯೋವೃದ್ಧ ರೋಗಿಯನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗುತ್ತಿದ್ದಾಗ ಆಂಬುಲೆನ್ಸ್ ಚಾಲಕ ಸರ್ವಿಸ್ ರಸ್ತೆಯಿಂದ ಹೆದ್ದಾರಿಯನ್ನು ಕ್ರಾಸ್ ಮಾಡುವ ವೇಳೆ ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ಲಾರಿಯು ಆಂಬುಲೆನ್ಸ್ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ರಭಸಕ್ಕೆ ಆಂಬುಲೆನ್ಸ್ ತಿರುಗಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ.

ಈ ಘಟನೆಯಿಂದ ಆಂಬುಲೆನ್ಸ್ನಲ್ಲಿ ಚಿಕಿತ್ಸೆಗೆಂದು ತೆರಳುತ್ತಿದ್ದ ವಕ್ವಾಡಿಯ ಸಿದ್ದಯ್ಯ ಹೆಗ್ಡೆ(87), ಕುಟುಂಬಿಕರಾದ ಉದಯ ಹೆಗ್ಡೆ(49),ಸುಶೀಲ ಶೆಟ್ಟಿ(65) ಎನ್ನುವ ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅದೃಷ್ಟವಾಶತ್ ಆಂಬುಲೆನ್ಸ್ ಚಾಲಕ ಐಯೂಬ್ ಕೋಟೇಶ್ವರ ಯಾವುದೇ ರೀತಿಯ ಪ್ರಾಣಪಾಯವಿಲ್ಲದೇ ಪಾರಾಗಿದ್ದಾರೆ. ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ದೃಶ್ಯಗಳನ್ನು ಪರಿಶೀಲಿಸಿ ಕ್ರಮ ಕೈಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು