News Karnataka Kannada
Saturday, April 27 2024
ಉತ್ತರಕನ್ನಡ

ಕುಂದಾಪುರ: ಬೀಜಾಡಿ ಮಿತ್ರ ಸಂಗಮದ ರಜತಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

Beejadi Mitra Sangama silver jubilee celebrations inaugurated
Photo Credit : By Author

ಕುಂದಾಪುರ: ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ ಮಿತ್ರ ಸಂಗಮ ಸಮಾಜದಲ್ಲಿ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಮನುಷ್ಯನ ಹುಟ್ಟು ಸಾವುಗಳ ನಡುವೆ ಕೇವಲವಾಗಿ ಬದುಕುವುದಕ್ಕಿಂತ ಸಮಾಜದಲ್ಲಿ ಬಡವರ ಕಣ್ಣೀರು ಒರೆಸುವ ಕೆಲಸಗಳನ್ನು ಮಾಡಬೇಕು ಎಂದು ಉಡುಪಿ ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್‌ ನ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಹೇಳಿದರು.

ಬೀಜಾಡಿ-ಗೋಪಾಡಿ ಮಿತ್ರಸಂಗಮದ ರಜತಮಹೋತ್ಸವ ಸಮಾರಂಭದ ರಜತಪಥ ನೆರಳು ಬೆಳಿಕಿನ ಸಹಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಆಡಳಿತ ಮೊಕ್ತೇಸರ ರಮಣ ಉಪಾಧ್ಯಾಯ ಸಂಸ್ಥೆಯ ವೆಬ್‌ಸೈಟ್‌ ನ್ನು ಬಿಡುಗಡೆಗೊಳಿಸಿದರು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ,ಶಿಕ್ಷಣ ಪ್ರೇಮಿ ಬಿ.ಶೇಷಗಿರಿ ಗೋಟ, ಕೋಟಿಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುರೇಶ್ ಬೆಟ್ಟಿನ್,ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ಕಾರ್ಕಡ ರಾಜು ಪೂಜಾರಿ, ಉದ್ಯಮಿ ಕೆ.ಆರ್.ನಾಯ್ಕ್, ಬೀಜಾಡಿ ಮಠದಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದದ ಅಧ್ಯಕ್ಷ ಬಿ.ಜಿ.ನಾಗರಾಜ್, ಮಿತ್ರಸಂಗಮದ ಗೌರವಾಧ್ಯಕ್ಷ ವಾದಿರಾಜ್ ಹೆಬ್ಬಾರ್, ಕಾರ್ಯದಶಿ೯ ರಾಜೇಶ್ ಆಚಾರ್,ರಜತಮಹೋತ್ಸವ ಸಮಿತಿಯ ಅಧ್ಯಕ್ಷ ದೀಪಾನಂದ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.

ಬೀಜಾಡಿ ಮೂಡುಶಾಲಾ ನಿವೃತ್ತ ಶಿಕ್ಷಕ ಕರುಣಾಕರ್ ಶೆಟ್ಟಿ ವಕ್ವಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸ್ವಾವಲಂಬನೆ ಬದುಕಿಗಾಗಿ ಮಹಿಳೆಯರಿಗೆ ಗೋವುಗಳನ್ನು ವಿತರಿಸಲಾಯಿತು.

ಸುಷ್ಮಾ ಆಚಾರ್ಯ ಪ್ರಾಥಿ೯ಸಿದರು.ರಜತ ಮಹೋತ್ಸವ ಕಾರ್ಯದಶಿ೯ ಚಂದ್ರ ಬಿ.ಎನ್ ಸ್ವಾಗತಿಸಿದರು. ಮಿತ್ರಸಂಗಮದ ಅಧ್ಯಕ್ಷ ಚಂದ್ರಶೇಖರ ಬೀಜಾಡಿ ಪ್ರಸ್ತಾವಿಕ ಮಾತನಾಡಿದರು. ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸ್ಥಾಪಕ ಕಾರ್ಯದಶಿ೯ ಮಂಜುನಾಥ್ ಬೀಜಾಡಿ ವಂದಿಸಿದರು.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಷ್ಮಾ ಆಚಾರ್ಯ ಬೀಜಾಡಿ ಮತ್ತು ಮಾಧವ ಬೀಜಾಡಿ ಇವರಿಂದ ಸುಗುಮ ಸಂಗೀತ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು