ಕುಂದಾಪುರ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶ ಫೆ.19 ರಂದು ಸಂಜೆ 4.30ಕ್ಕೆ ಸಿದ್ಧಾಪುರದ ಪೇಟೆಯಲ್ಲಿ ನಡೆಯಲಿದೆ.
ಕರಾವಳಿ ಪ್ರಜಾಧ್ವನಿ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,ಕೆ ಪ್ರತಾಪ್ ಚಂದ್ರ ಶೆಟ್ಟಿ,ಬಿ.ಕೆ ಹರಿಪ್ರಸಾದ್ ,ಕೆ ಗೋಪಾಲ ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ.
ಭಾನುವಾರ ಬೆಳಿಗ್ಗೆ 9.30ಕ್ಕೆ ಯಡ್ತರೆ ಬೈಪಾಸ್ , 11.30 ಕ್ಕೆ ನಾಗೂರು ರಾಷ್ಟ್ರೀಯ ಹೆದ್ದಾರಿ ಬಳಿ ಹಾಗೂ ಮಧ್ಯಾಹ್ನ 3ಕ್ಕೆ ವಂಡ್ಸೆ,ಸಂಜೆ 4 .30ಕ್ಕೆ ಸಿದ್ದಾಪುರ ಪೇಟೆ ಹತ್ತಿರ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ಜರುಗಲಿದೆ ಎಂದು ಪಕ್ಷದ ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಮೂಡುಬಗೆತಿಳಿಸಿದ್ದಾರೆ.
ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿ ಕೊಂಡಿದ್ದಾರೆ.