ಕುಂದಾಪುರ: ಜನರಿಗೆ ಅಗತ್ಯವಾಗಿ ಬೇಕಾಗಿರುವ ಕೆಲಸ ಕಾರ್ಯಗಳನ್ನು ಮಾಡಿಕೊಡುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಸಮಾಜ ಗುರುತಿಸುವಂತ ಕೆಲಸಗಳನ್ನು ಮಾಡಿದಾಗ ಮಾತ್ರ ಶಾಶ್ವತವಾಗಿ ಉಳಿಯಲಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 2.50 ಲಕ್ಷ.ರೂ ಅನುದಾನದಲ್ಲಿ ಗುಜ್ಜಾಡಿ ಗ್ರಾಮದ ನಾಯಕವಾಡಿಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀಸಂಗಮೇಶ್ವರ ರಿಕ್ಷಾ ನಿಲ್ದಾಣವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಹೆಚ್ಚಿನ ರಿಕ್ಷಾ ನಿಲ್ದಾಣಗಳಿಗೆ ಈಗಾಗಲೆ ಅನುದಾನವನ್ನು ಕೊಟ್ಟು ಅಭಿವೃದ್ಧಿಗೊಳಿಸಲಾಗಿದೆ ಬೈಂದೂರು ಕ್ಷೇತ್ರದಲ್ಲಿ 3000 ಕೋಟಿ.ರೂ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು 60,000 ಮನೆಗಳಿಗೆ ಕುಡಿಯುವ ನೀರನ್ನು ಒದಗಸಿಕೊಡುವಂತ ಕೆಲಸ ಪ್ರಗತಿಯಲ್ಲಿದೆ ಎಂದರು.
ನಾಯಕವಾಡಿ ಆಟೋ ರಿಕ್ಷಾ ಚಾಲಕ,ಮಾಲೀಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಗುಜ್ಜಾಡಿ ಗ್ರಾ.ಪಂ ಅಧ್ಯಕ್ಷೆ ಯಮುನಾ ಪೂಜಾರಿ ಮತ್ತು ಸದಸ್ಯರಾದ ಹರೀಶ್ ಮೇಸ್ತ,ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸೋಮನಾಥ ಮೇಸ್ತ,ಗೋಪಾಲ ನಾಯ್ಕ್,ಬಿ.ಎಂ.ಎಸ್ ಸಂಘದ ಅಧ್ಯಕ್ಷ ಸುರೇಶ ಪುತ್ರನ್,ಮಾಲಿಂಗ ಪೂಜಾರಿ,ರಿಕ್ಷಾ ಚಾಲಕ,ಮಾಲೀಕರ ಸಂಘದ ಸದಸ್ಯರು,ಗೂಡ್ಸ್ ಆಟೋ ಸಂಘದ ಸದಸ್ಯರು,ಸ್ಥಳೀಯರು ಉಪಸ್ಥಿತರಿದ್ದರು.
ನಾರಾಯಣ ಕೆ ಗುಜ್ಜಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.ರಾಮನಾಥ ಚಿತ್ತಾಲ್ ಸ್ವಾಗತಿಸಿ,ನಿರೂಪಿಸಿದರು.