ರೂಪಾಲಿ ಎಸ್.ನಾಯ್ಕ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರು ಪ್ರಮಾಣ ಮಾಡಲಿ

ಕಾರವಾರ: ನಾಡವರ ಸಮಾಜದ ಮತಗಳು ತಮಗೆ ಬೇಡ ಎಂದು ರೂಪಾಲಿ ಎಸ್.ನಾಯ್ಕ ಹೇಳಿದ್ದಾರೆಂದು ಆ ರೀತಿ ಸುಳ್ಳು ಸುದ್ದಿ ಹಬ್ಬಿಸಿದವರು ಧರ್ಮಸ್ಥಳದ ಮಂಜುನಾಥನ ಎದುರು ಪ್ರಮಾಣ ಮಾಡಲಿ. ನಾಡವರ ಸಮಾಜದ ಮತಗಳು ತಮಗೆ ಬೇಡ ಎಂದು ರೂಪಾಲಿ ಎಸ್.ನಾಯ್ಕ ಅವರು ಹೇಳಿದ್ದಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹರಿದುಬಿಡುತ್ತಿದ್ದಾರೆ.

ಹಾಗಿದ್ದರೆ ರೂಪಾಲಿ ಎಸ್.ನಾಯ್ಕ ಅವರು ಆ ರೀತಿ ಹೇಳಿದ್ದರ ವಿಡಿಯೋ ಆಗಲಿ, ಆಡಿಯೋ ಆಗಲಿ ಪ್ರದರ್ಶಿಸಲಿ. ರೂಪಾಲಿ ಎಸ್.ನಾಯ್ಕ ಅವರ ಮತಗಳನ್ನು ಕಸಿಯಲು ಇಂತಹ ಇಲ್ಲ ಸಲ್ಲದ, ರೂಪಾಲಿ ಎಸ್.ನಾಯ್ಕ ಎಲ್ಲೂ ಹೇಳಿರದ ಮಾತುಗಳನ್ನು ಸತ್ಯ ಸುದ್ದಿ ಎಂಬಂತೆ ಬಿಂಬಿಸಲಾಗುತ್ತಿದೆ. ಈ ಸುಳ್ಳು ಸುದ್ದಿ ಹಬ್ಬಿಸಿದವರು ಧರ್ಮಸ್ಥಳದ ಮಂಜುನಾಥಸ್ವಾಮಿಯ ಎದುರು ಪ್ರಮಾಣ ಮಾಡಲಿ. ರೂಪಾಲಿ ಎಸ್.ನಾಯ್ಕ ಅವರಿಗೆ ಎಲ್ಲ ಸಮಾಜದ ಬಗ್ಗೆ ಗೌರವ ಇದೆ. ಯಾವುದೇ ಸಮಾಜಕ್ಕೆ ಕಿಂಚಿತ್ತೂ ಧಕ್ಕೆ ಆಗದ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಗೆಲುವು, ಸೋಲು ಬೇರೆ ಮಾತು. ಆದರೆ ಅವರ ವ್ಯಕ್ತಿತ್ವಕ್ಕೆ ಮಸಿ ಬಳೆಯುವಂತಹ, ಒಂದು ಸಮಾಜದ ವಿರೋಧಿ ಎಂದು ಬಿಂಬಿಸುವ ಕಿಡಿಗೇಡಿಗಳು ಇದನ್ನು ಅರ್ಥಮಾಡಿಕೊಂಡು ಈ ಸವಾಲನ್ನು ಸ್ವೀಕರಿಸಬೇಕು.

ನಾಡವ ಸಮಾಜದ ಮುಖಂಡರು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೊಗ್ರೆ ದೇವಾಲಯಕ್ಕೆ ಸರ್ಕಾರದಿಂದ 50 ಲಕ್ಷ ರೂ.ಗಳನ್ನು ರೂಪಾಲಿ ನಾಯ್ಕ ಅವರು ಮಂಜೂರಿ ಮಾಡಿಸಿರುವುದೂ ಗಮನಾರ್ಹವಾಗಿದೆ. ಇನ್ನು ರೂಪಾಲಿ ಎಸ್.ನಾಯ್ಕ ಅವರು ಕಾರವಾರ ಜನತೆಯ ಮತಗಳು ತಮಗೆ ಬೇಡ ಎಂದು ಹೇಳಿದ್ದಾರೆ ಎಂಬ ವದಂತಿಯನ್ನೂ ಕೆಲ ಕಿಡಿಗೇಡಿಗಳು ಹಬ್ಬಿಸಿದ್ದಾರೆ. ನೇರವಾಗಿ ಚುನಾವಣೆಯಲ್ಲಿ ಎದುರಿಸಲಾರದ ಕೆಲವರು ಇಂತಹ ವಿಕೃತ ಕುತಂತ್ರ ನಡೆಸಿದ್ದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ ಎಂದೂ ಹೇಳಬೇಕಾಗಿದೆ.

ಮುಂಬರುವ ದಿನಗಳಲ್ಲಿ ಇಂತಹ ವಿಕೃತ ಮನಸ್ಸಿನವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಕಾರವಾರ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ ಗುನಗಿ, ನಗರ ಘಟಕದ ಅಧ್ಯಕ್ಷ ನಾಗೇಶ ಕುರ್ಡೇಕರ ಹಾಗೂ ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gayathri SG

Recent Posts

ಕಾಂಗ್ರೆಸ್‍ ನ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಜನ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಯಿಂದ ಬದುಕುತ್ತಿದ್ದಾರೆ. ನಮ್ಮ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

11 mins ago

ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನಿನಲ್ಲಿ ಬಿಡುಗಡೆಗೆ ಸಿದ್ಧ

ಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.…

48 mins ago

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ, ಕೇಳುವುದು ಇಲ್ಲ : ಸಿಎಂ

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…

1 hour ago

ತಂದೆ ಕಿರುಕುಳಕ್ಕೆ ಬೇಸತ್ತು ತಾಯಿ ಆತ್ಮಹತ್ಯೆಗೆ ಯತ್ನ: ಪ್ರಾಣ ಉಳಿಸಿದ 7 ವರ್ಷದ ಬಾಲಕಿ

ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ.

2 hours ago

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

2 hours ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

3 hours ago