News Karnataka Kannada
Sunday, April 28 2024
ಉತ್ತರಕನ್ನಡ

ಕಾರವಾರ: ನಕಲಿ ಆಧಾರ್ ಹಾಗೂ ಪಾನ್ ಕಾರ್ಡ್ ತಯಾರಿಸುತ್ತಿದ್ದ ವ್ಯಕ್ತಿ ಬಂಧನ

Man arrested for making fake Aadhaar and PAN cards
Photo Credit : News Kannada

ಕಾರವಾರ: ನಕಲಿ ಆಧಾರ್ ಹಾಗೂ ಪಾನ್ ಕಾರ್ಡ್ ತಯಾರಿಸುತ್ತಿದ್ದ ವ್ಯಕ್ತಿಯನ್ನು ಕುಮಟಾ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ದಿಲೀಪ ಬಿ. ಆರ್. ರಾಜೆಗೌಡ ಬಂಧಿತ ಆರೋಪಿ. ಕುಮಟಾ ತಾಲೂಕಿನ ಹೆಗಡೆ ನಿವಾಸಿ ಸುಬ್ರಾಯ ಕಡೆಕೋಡಿ ಅವರ ಮೃತ ಪುತ್ರ ಶಮಂತ ಕಡೆಕೋಡಿ ಅವರ ಹೆಸರಿನ ಆಧಾರ ಕಾರ್ಡ್ ದಾಖಲೆಗಳನ್ನು ತಿದ್ದಿ, ದುರ್ಬಳಕೆ ಮಾಡಿರುವ ಬಗ್ಗೆ ಸುಬ್ರಾಯ ಕಡೆಕೋಡಿ ಅವರು ಕುಮಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ಹಾಗೂ ಪಿಎಸ್ಐ ನವೀನ ನಾಯ್ಕ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ದಿಲೀಪ, ಮೃತರ ಹೆಸರಿನ ಆಧಾರ ಕಾರ್ಡ್ ಮತ್ತು ಪಾನ್ ಕಾರ್ಡ್ಗಳನ್ನು ತನ್ನದೇ ಸಾಫ್ಟ್ ವೇರ್ ಬಳಸಿ ನಕಲಿಸುತ್ತಿದ್ದ. ಅದನ್ನು ಬಳಸಿ ಗೋವಾದಲ್ಲಿ ಐ ಫೋನ್ ಖರೀದಿಸಿ ಮೋಸ ಮಾಡಿದಲ್ಲದೇ ಇದೇ ಕೃತ್ಯ ರಾಜ್ಯದ ವಿವಿಧೆಡೆ ಮಾತ್ರವಲ್ಲದೇ ಸಿಐಡಿಯಲ್ಲೂ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು