ಕಾರವಾರ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಬನವಾಸಿಗೆ ಆಗಮಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಬೃಹತ್ ರೋಡ್ ಶೋ ಹಾಗೂ ಮೂರು ಸಾವಿರ ಮಹಿಳೆಯರಿಂದ ಪೂರ್ಣಕುಂಭಗಳ ಮೂಲಕವಾಗಿ ಅತ್ಯಂತ ವಿಜೃಂಭಣೆಯಿಂದ ಕನ್ನಡದ ಕಾಶಿ ಬನವಾಸಿಗೆ ಸ್ವಾಗತಿಸಿದರು.
ಈ ವೇಳೆ ರೈತ ಮೋರ್ಚಾ ಶಿರಸಿ ಗ್ರಾಮೀಣ ಮಂಡಲದ ವತಿಯಿಂದ ಬನವಾಸಿ ಭಾಗದ ಪ್ರಮುಖ ಬೆಳೆಯಾದ ಅನಾನಸ್ ಹಾರವನ್ನು ಹಾಕುವ ಮೂಲಕವಾಗಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ರೂಪಾಲಿ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ಧಿ, ನಿಗಮ ಮಂಡಳಿಯ ಅಧ್ಯಕ್ಷರಾದ ಗೋವಿಂದ ನಾಯ್ಕ ಸೇರಿದಂತೆ ವಿವಿಧಸ್ಥರದ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾಸ್ಥರದ ಅಧಿಕಾರಿಗಳು ಉಪಸ್ಥಿತರಿದ್ದರು.