News Karnataka Kannada
Sunday, April 28 2024
ಉತ್ತರಕನ್ನಡ

ಫ್ಲೈ ಓವರ್ ಲೋಕಾರ್ಪಣೆಗೊಳಿಸಿದ ಶಾಸಕ ಸತೀಶ್ ಸೈಲ್

MLA Satish Sail inaugurates flyover
Photo Credit : News Kannada

ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ನಗರದಲ್ಲಿ ಫ್ಲೈ ಓವರ್ ಹಾಗೂ ಟನಲ್ ಸಂಚಾರವನ್ನು ಶಾಸಕ ಸತೀಶ್ ಸೈಲ್ ಸೋಮವಾರ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸತೀಶ್ ಸೈಲ್ ಐಆರ್.ಬಿ. ಕಂಪೆನಿಯವರು ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಲ್ಲಲ್ಲಿ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಸಭೆ ನಡೆಸಿ ರಾಷ್ಟ್ರೀಯ ಹೆದ್ದಾರಿ 66ರ ಉಳಿದ ಕಾಮಗಾರಿಗಳಿಗೆ ವೇಗ ನೀಡುವಂಗತೆ ಐ.ಆರ್.ಬಿ ಅಧಿಕಾರಿಗಳಿಗೆ ಸೂಚಿಸುತ್ತೇನೆ.

ಫ್ಲೈ ಓವರ್ ಹಾಗೂ ಟನಲ್ ಕಾಮಗಾರಿ ಮೇ ತಿಂಗಳಿನಲ್ಲಿಯೇ ಪೂರ್ಣಗೊಳ್ಳಬೇಕಿತ್ತು. ಆದರೆ ಐ.ಆರ್.ಬಿ ಯ ನಿಧಾನಗತಿಯ ಕಾಮಗಾರಿಯಿಂದ ತಡವಾಗಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಉಳಿದಿರುವ ಹೆದ್ದಾರಿಯ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇವೆ. ಹೆದ್ದಾರಿಯ ಟೋಲ್ಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೆ ಐ.ಆರ್.ಬಿ.ಯು ಕನಿಷ್ಟ ವೇತನ ನೀಡುತ್ತಿಲ್ಲ. ಹೀಗಾಗಿ ಈ ಬಗ್ಗೆ ಜಿಲ್ಲಾಧಿಕಾರಿಯು ಐ.ಆರ್.ಬಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮಾತನಾಡಿ ಫ್ಲೈಓವರ್ ಹಾಗೂ ಟನಲ್ ಇಂದು ಲೋಕಾರ್ಪಣೆಗೊಂಡಿದೆ. ಸಾರ್ವಜನಿಕರು ಸುರಕ್ಷಿತ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಕಾಂಗ್ರೆಸ್ನ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವ್ಕರ, ಕಾರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ ನಾಯ್ಕ ಹಾಗು ಐ.ಆರ್.ಬಿ.ಯ ಅಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು