News Karnataka Kannada
Friday, May 03 2024
ಉತ್ತರಕನ್ನಡ

ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ನಿಂದ ಅಭಿವೃದ್ಧಿ ನಿರ್ಲಕ್ಷ್ಯ, ಶ್ರೀಪಾದ ನಾಯ್ಕ

Neglect of development by the ruling Congress for decades, Sripada Nayka
Photo Credit : News Kannada

ಕಾರವಾರ: ಅನೇಕ ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಅಭಿವೃದ್ಧಿ ಮಾಡಿಲ್ಲ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹೇಳಿದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರವಾರದಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಬಡವರಿಗೆ, ಯುವಕರಿಗೆ, ಅನೇಕ ವರ್ಗದವರು ವಿವಿಧ ಯೋಜನೆಯ ಲಾಭವನ್ನು ಇಂದು ಪಡೆದುಕೊಳ್ಳುತ್ತಿದ್ದಾರೆ. ಅದರಂತೆ ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಇಪ್ಪತ್ತು ವರ್ಷಗಳಲ್ಲಿ ಯಾವ ಶಾಸಕರ ಕೈಯಲ್ಲೂ ಆಗದಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಹಿಳಾ ಶಾಸಕಿ ದಿಟ್ಟತನದಿಂದ ಮಾಡಿ ತೋರಿಸಿದ್ದಾರೆ. ಅನೇಕಯೋಜನೆಗಳು ಚಾಲ್ತಿಯಲ್ಲಿವೆ ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಬಿಜೆಪಿ ನಗರ ಅಧ್ಯಕ್ಷ ನಾಗೇಶ್ ಕುರುಡೇಕರ್. ನಗರಸಭೆ ಅಧ್ಯಕ್ಷರಾದ ಡಾ. ನಿತಿನ್ ಪಿಕಿಳೆ, ಬಿಜೆಪಿ ಜಿಲ್ಲಾ ವಕ್ತಾರರಾದ ನಾಗರಾಜ ನಾಯಕ, ನಿಕಟಪೂರ್ವ ವಕ್ತಾರರಾದ ರಾಜೇಶ ನಾಯಕ, ನಗರಸಭೆ ಉಪಾಧ್ಯಕ್ಷರಾದ ಪ್ರಕಾಶ ನಾಯ್ಕ, ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು