News Karnataka Kannada
Sunday, May 05 2024
ಉತ್ತರಕನ್ನಡ

ಭಟ್ಕಳ: ಅಜ್ಜನಿಂದಲೇ ಮೊಮ್ಮಗನ ಅಪರಣ, ಬಾಲಕನನ್ನು ಪತ್ತೆ ಹಚ್ಚಿದ ಪೊಲೀಸರು

Police trace the boy
Photo Credit :

ಭಟ್ಕಳ: ತಾಲೂಕಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಅಪಕರಣಕ್ಕೆ ಒಳಗಾಗಿದ್ದ ಬಾಲಕನನ್ನು ಜಿಲ್ಲಾ ಪೊಲೀಸರು  ವಾಪಸ್ ಮನೆಗೆ ಸೇರಿಸುವಲ್ಲಿ  ಯಶಸ್ವಿಯಾಗಿದ್ದಾರೆ.

ಹಣ ವಾಪಸ್ ಪಡೆಯುವ ಸಲುವಾಗಿ ಅಜ್ಜನೇ ಮೊಮ್ಮಗನ ಕಿಡ್ನಾಪ್ ಮಾಡಿಸಿರುವುದು ಭಟ್ಕಳದ ಆಜಾದ್ ನಗರದಲ್ಲಿ ನಡೆದ ಬಾಲಕನ ಕಿಡ್ನಾಪ್ ಪ್ರಕರಣದಲ್ಲಿ ಬಯಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿ ಬಾಲಕನನ್ನು ಗೋವಾ ಕಲ್ಲಂಗುಟ್ ನಲ್ಲಿ ಪತ್ತೆ ಹಚ್ಚಿದ್ದಾರೆ. ಭಟ್ಕಳ ಬದ್ರಿಯಾ ನಗರದ ಅನೀಸ್ ಭಾಷಾ ಎಂಬಾತನನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಬಾಲಕನ ತಾಯಿಯ ಮಾವ ಹಾಗೂ ಬಾಲಕನ ತಂದೆಯ ನಡುವೆ ಹಣದ ವ್ಯವಹಾರವಿತ್ತು.

ಕೊಟ್ಟ ಹಣವನ್ನು ವಾಪಸ್ ಪಡೆಯುವ ಸಲುವಾಗಿ ಅಜ್ಜನೇ ತನ್ನ ಸಹಚರರಿಂದ ಕಿಡ್ನಾಪ್ ಮಾಡಿಸಲಾಗಿತ್ತು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಾಲಕನ ಅಜ್ಜ ದುಬೈನಲ್ಲಿರುವ ಇನಾಯ್‌ಉಲ್ಲಾ ಹಾಗೂ ಇನ್ನೂ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಒಬ್ಬನನ್ನು ಮಾತ್ರ ಬಂಧಿಸಲಾಗಿದ್ದು, ಇನ್ನೂ ನಾಲ್ವರನ್ನು ಬಂಧಿಸಬೇಕಿದೆ.

ಸಿಸಿ ಟಿವಿ ದೃಶ ಹಾಗೂ ಕುಟುಂಬದ ಹಿನ್ನೆಲೆಯನ್ನು ಆಧರಿಸಿ ಕಾರ್ಯಾಚರಣೆ ನಡೆದಿದೆ ಎಂದು ಎಸ್ಪಿ ಡಾ. ಸುಮನ್ ಪೆನ್ನೇಕರ್ ತಿಳಿಸಿದ್ದಾರೆ.. ಅಂಗಡಿಗೆ ಹೋಗಿದ್ದ ಪಟ್ಟಣದ ಆಜಾದ್ ನಗರದ ಬಾಲಕ ಶನಿವಾರ ನಾಪತ್ತೆಯಾದ್ದ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು