News Karnataka Kannada
Tuesday, April 30 2024
ಉತ್ತರಕನ್ನಡ

ಸಂಸದ ಅನಂತಕುಮಾರ ಹೆಗಡೆಗೆ ಟಿಕೇಟ್‌ ಕಾರಣ ಏನ್‌ ಗೊತ್ತ : ಇಲ್ಲಿದೆ ವಿವರ

ಲೋಕಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಐದನೇ ಬಿಡುಗಡೆ ಆಗಿದ್ದು ಅದರಲ್ಲಿ ಹಾಲಿ ಸಂಸದ ಅನಂತಕುಮಾರ ಹೆಗಡೆಗೆ ಟಿಕೇಟ್‌ ಕೈ ಜಾರಿ ಕಾಗೇರಿ ಅವರ ಕೈ ಸೇರಿದೆ.ಹಿಂದೂ ಫೈರ್​ ಬ್ರ್ಯಾಂಡ್​ ಎಂದೆ ಹೆಸರುವಾಸಿಯಾಗಿರುವ ಇವರು ಚುನಾವಣಾ ರಾಜಕೀಯದಿಂದ ವಿಮುಖರಾಗಿರುವುದಾಗಿ ಹೇಳಿದ್ದ ಅನಂತ ಕುಮಾರ ಹೆಗಡೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯರಾದರೂ ಟಿಕೆಟ್ ಪಡೆಯುವಲ್ಲಿ ಸಫಲರಾಗಲಿಲ್ಲ.
Photo Credit : NewsKarnataka

ಉತ್ತರಕನ್ನಡ: ಲೋಕಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಐದನೇ ಬಿಡುಗಡೆ ಆಗಿದ್ದು ಅದರಲ್ಲಿ ಹಾಲಿ ಸಂಸದ ಅನಂತಕುಮಾರ ಹೆಗಡೆಗೆ ಟಿಕೇಟ್‌ ಕೈ ಜಾರಿ ಕಾಗೇರಿ ಅವರ ಕೈ ಸೇರಿದೆ.ಹಿಂದೂ ಫೈರ್​ ಬ್ರ್ಯಾಂಡ್​ ಎಂದೆ ಹೆಸರುವಾಸಿಯಾಗಿರುವ ಇವರು ಚುನಾವಣಾ ರಾಜಕೀಯದಿಂದ ವಿಮುಖರಾಗಿರುವುದಾಗಿ ಹೇಳಿದ್ದ ಅನಂತ ಕುಮಾರ ಹೆಗಡೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯರಾದರೂ ಟಿಕೆಟ್ ಪಡೆಯುವಲ್ಲಿ ಸಫಲರಾಗಲಿಲ್ಲ.

ಇದಕ್ಕೆ ಕಾರಣ ಏನೆಂದರೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ತನ್ನದೆ ಆದ ಕಾರ್ಯರ್ತರನ್ನು ಹೊಂದಿರುವ ಅನಂತ ಕುಮಾರ ಹೆಗಡೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಒಂದೆ ಒಂದು ಬಾರಿ ಪ್ರಚಾರ ಮಾಡಲಿಲ್ಲ. ತನಗೂ ವಿಧಾನಸಭಾ ಚುನಾವಣೆಗೂ ಸಂಬಂಧ ಇಲ್ಲ ಎಂಬಂತೆ ಮನೆಯಲ್ಲಿಯೇ ಉಳಿದುಕೊಂಡಿದ್ದರು.

ಅಷ್ಟೆ ಅಲ್ಲದೆ ಕಾರವಾರ ಹಾಗೂ ಶಿರಸಿ ಬಿಜೆಪಿ ಅಭ್ಯರ್ಥಿ ಸೋಲಿಸಲು ಅನಂತ ಕುಮಾರ ಹೆಗಡೆ ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಬೆಂಬಲಿಸಿದರು ಎಂಬ ಆರೋಪ ಜಿಲ್ಲೆಯಲ್ಲಿ ಕೇಳಿಬಂದಿದೆ.ವಿಧಾನಸಭಾ ಚುನಾವಣೆ ಪ್ರಚಾರಕ್ಕೆಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಅಂಕೊಲಾಗೆ ಬಂದರೂ ಸಹಿತ ಪ್ರಧಾನಿ ಸ್ವಾಗತಕ್ಕೆ ಬಾರದೆ ಮನೆಯಲ್ಲಿ ಉಳಿದುಕೊಂಡಿದ್ದರು.ಅಲ್ಲದೇ 6 ಬಾರಿ ಗೆಲುವು ಸಾಧಿಸಿದ್ದರು ಯಾವುದೆ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿಲ್ಲ ಇದರಿಂದ ಬಿಜೆಪಿ ಕಾರ್ಯಕರ್ತರಿಗೆ ಮುಜುಗರ ಉಂಟುಮಾಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು