ಕಾರವಾರ: ಕಳೆದ ಕೆಲವು ದಿನಗಳ ಎಡಬಿಡದೆ ಸುರಿಯುತ್ತಿದ್ದ ಮಳೆ ಶನಿವಾರ ಕೊಂಚ ಬಿಡುವು ನೀಡಿದ್ದರಿಂದ ಕೃಷಿ ಕಾರ್ಯ ಹಾಗೂ ಮೀನುಗಾರಿಕೆ ಚುರುಕುಗೊಂಡಿದೆ.
ಗಾಳಿ, ಮಳೆಯ ಕಾರಣ ಮೀನುಗಾರಿಕೆ ನಡೆಸಲು ಕಡಲಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಡಲತೀರದಲ್ಲಿ ನಡೆಯುತ್ತಿದ್ದ ಸಾಂಪ್ರದಾಯಿಕ ಮೀನುಗಾರಿಕೆ ನಾಲ್ಕೈದು ದಿನಗಳಿಂದ ಸ್ಥಗಿತಗೊಂಡಿತ್ತು. ಗಾಳಿ, ಮಳೆ ಕಡಿಮೆಯಾಗಿರುವ ಕಾರಣ ಸ್ಥಗಿತಗೊಂಡಿದ್ದ ಮೀನುಗಾರಿಕೆ ಶನಿವಾರ ಮತ್ತೆ ಆರಂಭವಾಗಿರುವುದು ಕಂಡುಬAತು. ನಗರದ ಅಲಿಗದ್ದಾ ಮತ್ತು ಟ್ಯಾಗೋರ ಕಡಲತೀರದಲ್ಲಿ ಮೀನುಗಾರರು ಯೆಂಡಿ ಬಲೆ ಸಾಂಪ್ರದಾಯಿಕ ಮೀನುಗಾರಿಕೆ ನಡೆಸಿದರು.
ಬಿಟ್ಟುಬಿಟ್ಟು ಸುರಿಯುತ್ತಿರುವ ಮಳೆಯ ಮತ್ತು ಕಡಲಿನ ಸಣ್ಣ ಆರ್ಭಟದ ನಡುವೆಯೇ ಮೀನುಗಾರರು ಮೀನುಗಾರಿಕೆ ನಡೆಸಿದರು. ಕೆಲವರು ಬಂಪರ್ ಮೀನು ಹಿಡಿದರೆ ಮತ್ತೆ ಕೆಲವರು ನಿರಾಸೆ ಅನುಭವಿಸಿದರು. ಅನೇಕ ಮೀನುಗಾರಿಕಾ ಬಲೆಗೆ ಪ್ಲಾಸ್ಟಿಕ್, ತ್ಯಾಜ್ಯಗಳೇ ಹೆಚ್ಚಿನ ಪ್ರಮಾಣದಲ್ಲಿ ಸಿಲುಕಿರುವುದು ಕಂಡು ಬಂದಿದೆ.
ತಾಲ್ಲೂಕಿನಾದ್ಯಂತ ಮೀನುಗಾರಿಕೆ ಆರಂಭವಾಗಿದ್ದರಿಂದ ಮೀನು ಮಾರುಕಟ್ಟೆಯಲ್ಲೂ ಮೀನುಗಳ ಆಗಮಮನವೂ ಹೇರಳ ಪ್ರಮಾಣದಲ್ಲಿತ್ತು. ಮಳೆಗಾಲವಾಗಿದ್ದರಿಂದ ಯಾಂತ್ರಿಕೃತ ಮೀನುಗಾರಿಕೆಗೆ ನಿಷೇಧವಿದೆ ಹಾಗಾಗಿ ಸಹಜವಾಗಿಯೇ ಮಾರುಕಟ್ಟೆಯಲ್ಲಿ ಮೀನಿಗೆ ಹೆಚ್ಚಿನ ಬೇಡಿಕೆ ಇದ್ದು, ಬೆಲೆಯೂ ಹೆಚ್ಚಾಗಿದೆ. ನಗರದ ಮಾರುಕಟ್ಟೆಯಲ್ಲಿ ಮೀನುಗಳನ್ನು ಪಾಲುಗಳಾಗಿ ವಿಂಗಡಿಸಿ ಮಾರಾಟ ಮಾಡಲಾಗುತ್ತದೆ.
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…