ಶೀಘ್ರದಲ್ಲೇ ತೆರೆ ಕಾಣಲು ಸಿದ್ಧವಾದ “ಶ್ರೀಮಂತ”

ಕಾರವಾರ: ಬಾಲಿವುಡ್ ನಟ ಸೋನು ಸೂದ್ ಮೊದಲ ಬಾರಿಗೆ ಕನ್ನಡದಲ್ಲಿ ನಟಿಸಿರುವ ‘ಶ್ರೀಮಂತ’ ಚಲನಚಿತ್ರ ಏಪ್ರಿಲ್ ಎರಡನೇ ವಾರದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ ಸಹಾಯಕ ನಿರ್ದೇಶಕ ಶಿವರಾಜ್ ದಳವಾಯಿ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು, ಹಾಸನ್ ರಮೇಶ್ ಕಥೆ- ಚಿತ್ರಕಥೆ- ಸಂಭಾಷಣೆ- ನಿರ್ದೇಶನದ, ಅವರದ್ದೇ ಗೋಲ್ಡನ್ ರೈನ್ ಮೂವೀಸ್ ಸಂಸ್ಥೆಯಡಿ ನಿರ್ಮಾಣಗೊಂಡಿರುವ ಮೊದಲ ಚಿತ್ರ ಇದಾಗಿದ್ದು, ನಾದಬ್ರಹ್ಮ ಡಾ.ಹಂಸಲೇಖರವರ ಎಂಟು ಹಾಡುಗಳನ್ನ ಒಳಗೊಂಡಿದೆ. ವಿಶೇಷವೆಂದರೆ, ದಿ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಹಾಡಿರುವ ಕೊನೆಯ ಗೀತೆ ಕೂಡ ಈ ಸಿನೇಮಾದಲ್ಲಿದೆ.

ರೈತನ ಕುರಿತಾದ ಈ ಸಿನೇಮಾದ ಚಿತ್ರೀಕರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಿತ್ರೀಕರಣಗೊಂಡಿದ್ದು, ಅನ್ನದಾತನ ನೋವು- ನಲಿವನ್ನು ಸಾರುವ ಚಿತ್ರ ಇದಾಗಿದೆ. ನಾಯಕಿಯಾಗಿ ಮುಂಬೈನ ಬೆಡಗಿ ವೈಷ್ಣವಿ ಪಟವರ್ಧನ್, ವೈಷ್ಣವಿ ಮೆನನ್ ಜೊತೆಗೆ ಕಲ್ಯಾಣ ಕರ್ನಾಟಕದ ಕ್ರಾಂತಿ ಎಂಬ ಯುವ ಪ್ರತಿಭೆ ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಚರಣ್ ರಾಜ್, ಸಾಧು ಕೋಕಿಲ, ರಮೇಶ್ ಭಟ್, ರಾಜು ತಾಳಿಕೋಟೆ ಹೀಗೆ ದೊಡ್ಡ ದೊಡ್ಡ ಹಿರಿಯ ನಟರು ಚಿತ್ರದಲ್ಲಿದ್ದಾರೆ.

Gayathri SG

Recent Posts

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

14 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

41 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

3 hours ago