ಸಿದ್ದಾಪುರ: ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದ ಮಾನಸ ಎಂಬ ವಿದ್ಯಾರ್ಥಿನಿ ಪಿಯು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತ ವಿದ್ಯಾರ್ಥಿನಿ ಶಂಕರನಾರಾಯಣ ಗ್ರಾಮದ ಒಡ್ಡನಬೇರು ಬಾಬಣ್ಣ ಕುಲಾಲರ ಪುತ್ರಿ. ಈಕೆ ಏಪ್ರಿಲ್ ತಿಂಗಳ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಳು. ನಂತರ ಜೂನ್ ತಿಂಗಳ ಸಪ್ಲಿಮೆಂಟರಿ ಪರೀಕ್ಷೆ ಕಟ್ಟಿದ್ದುಳು.
ತಾನು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಬಹುದು ಎಂದು ಹೆದರಿ ಮನೆಯ ಎದುರಿನ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.