News Karnataka Kannada
Thursday, May 02 2024
ಉತ್ತರಕನ್ನಡ

ಗೀತಾ ಶಿವರಾಜ್​ ಕುಮಾರ್ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ ಕೊಡಲ್ಲ ಎಂದ ಸ್ವಾಮೀಜಿ

ಸ್ಯಾಂಡಲ್​​ವುಡ್ ಹ್ಯಾಟ್ರಿಕ್ ಹೀರೋ ಡಾ ಶಿವರಾಜ್ ಕುಮಾರ್ ಹೆಂಡತಿ ಗೀತಾ ಅವರು ಈ ಬಾರಿ ಮತ್ತೊಮ್ಮೆ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕೆ ಪತಿ ಶಿವರಾಜ್ ಕುಮಾರ್​ ಸಹ ಸಹಮತ ವ್ಯಕ್ತಪಡಿಸಿದ್ದು, ಗೀತಾ ಎಂಪಿ ಆಗುವುದನ್ನು ನೋಡುವ ಆಸೆ ಇದೆ ಎಂದು ಹೇಳಿದ್ದಾರೆ.
Photo Credit : News Kannada

ಕಾರವಾರ: ಸ್ಯಾಂಡಲ್​​ವುಡ್ ಹ್ಯಾಟ್ರಿಕ್ ಹೀರೋ ಡಾ ಶಿವರಾಜ್ ಕುಮಾರ್ ಹೆಂಡತಿ ಗೀತಾ ಅವರು ಈ ಬಾರಿ ಮತ್ತೊಮ್ಮೆ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕೆ ಪತಿ ಶಿವರಾಜ್ ಕುಮಾರ್​ ಸಹ ಸಹಮತ ವ್ಯಕ್ತಪಡಿಸಿದ್ದು, ಗೀತಾ ಎಂಪಿ ಆಗುವುದನ್ನು ನೋಡುವ ಆಸೆ ಇದೆ ಎಂದು ಹೇಳಿದ್ದಾರೆ.

ನಟ ಶಿವರಾಜ್ ಕುಮಾರ್ ಸಕ್ರಿಯ ರಾಜಕಾರಣದಿಂದ ದೂರ ಇದ್ದಾರೆ. ಆದ್ರೆ, ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಈ ಹಿಂದೆ ಜೆಡಿಎಸ್​ನಿಂದ ಚುನಾವಣೆಗೆ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಇದೀಗ ಮತ್ತೊಮ್ಮೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೆ ಈಡಿಗ ಸಮುದಾಯದ ಸ್ವಾಮಿಜಿ ಪ್ರಣವಾನಂದ ಸ್ವಾಮೀಜಿ ಬೆಂಬಲ ನೀಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.

ಕಾರವಾದರದಲ್ಲಿ ಮಾತನಾಡಿದ ಈಡಿಗ ಸಮುದಾಯದ ಸ್ವಾಮಿಜಿ ಪ್ರಣವಾನಂದ ಶ್ರೀ, ಶಿವಮೊಗ್ಗ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಿದರೇ ಬೆಂಬಲ ಕೊಡುವುದಿಲ್ಲ. ದಿವಂಗತ ಡಾ. ರಾಜಕುಮಾರ್ ರವರಿಗೆ ಮುಖ್ಯಮಂತ್ರಿ ಸ್ಥಾನದ ಅವಕಾಶ ಸಿಕ್ಕರೂ ಅದನ್ನು ಒಪ್ಪಲಿಲ್ಲ. ದೊಡ್ಡ ಅವಕಾಶ ಬಂದ್ರು ಡಾ . ರಾಜಕುಮಾರ್ ರಾಜಕಾರಣಕ್ಕೆ ಹೋಗಿಲ್ಲ. ಅವರ ಕುಟುಂಬವೂ ರಾಜಕಾಣಕ್ಕೆ ಬರಬಾರದು. ಅವರಂತೆ ಇರಬೇಕು ಎಂಬಯದೇ ನನ್ನ ಭಾವನೆ ಎಂದು ಹೇಳಿದರು.

ಇನ್ನು ಇದೇ ವೇಳೆ ತಮ್ಮ ಸಮುದಾಯದ ನಾಯಕ ಬಿ.ಕೆ ಹರಿಪ್ರಸಾದ್ ವಿರುದ್ಧವು ಸಹ ಪ್ರಣಾವನಂದ ಶ್ರೀ ಕಿಡಿಕಾರಿದ್ದಾರೆ. ಬಿಕೆ ಹರಿಪ್ರಸಾದ್ ಕೊಡವ ಎಲ್ಲಾ ಹೇಳಿಕೆಗೆ ನಮ್ಮ ಸಹಕಾರ ಇಲ್ಲ. ಈ ದೇಶದ ಮೇಲೆ ಭಕ್ತಿ ಇರುವವರು, ಈ ದೇಶದ ಅನ್ನ ಗಾಳಿ ತೊಗೊಂಡು ಯಾರೂ ಕೂಡ ದೇಶದ ವಿರುದ್ಧ ಮಾತನಾಡಬಾರದು. ದೇಶದ ವಿರುದ್ದ ಮಾತನಾಡಿದ್ರೆ ಹೆತ್ತ ತಾಯಿಗೆ ದ್ರೋಹ ಮಾಡಿದಂತೆ . ದೇಶದ್ರೋಹ ಹೇಳಿಕೆಗಳನ್ನ ನಾವು ನಮ್ಮ ಸಮಾಜದವರು ಎಂದೂ ಕೊಡುವುದಿಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು