News Karnataka Kannada
Monday, April 29 2024
ಉತ್ತರಕನ್ನಡ

ಜ.22ರಂದು ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಹಾಡು ಪ್ರಸಾರ

New Project 2024 01 11t162752.972
Photo Credit : News Kannada

ಕಾರವಾರ: ಗೀತೆ ರಚನೆಗಾರ ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂಬ ಗೀತೆ ಜ.22 ರಂದು ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಪ್ರಸಾರವಾಗಲಿದೆ. ಇವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿದ್ದಾರೆ.

ಈ ಕುರಿತು ಅಯೋಧ್ಯೆ ಟ್ರಸ್ಟ್ ಎಕ್ಸ್‌ನಲ್ಲಿ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದೆ. ನಾನು ರಚಿಸಿದ ಹಾಡನ್ನು ರಾಮಮಂದಿರ ಟ್ರಸ್ಟ್‌ನವರು ತೆಗೆದುಕೊಂಡಿದ್ದಕ್ಕೆ ಖುಷಿಯಾಗಿದೆ ಎಂದು ಡಾ.ಗಜಾನನ ಶರ್ಮಾ ಹೇಳಿದ್ದಾರೆ.

ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ರಾಮಕಥೆಗಾಗಿ ಚಾತುರ್ಮಾಸದ ವೇಳೆ ಉತ್ತಮ ಗೀತ ರಚನೆ ಮಾಡಲು ಡಾ.ಗಜಾನನ ಶರ್ಮಾರವರಿಗೆ  ಹೇಳಿದ್ದರಂತೆ.  ಆದರೆ ಶರ್ಮರವರ ಕಾರ್ಯ ಒತ್ತಡದಿಂದ   ರಚನೆ ಮಾಡಲಾಗಿರಲಿಲ್ಲ.  ಆದರೆ ಇವರು ಒಮ್ಮೆ   ಕೇರಳಕ್ಕೆ ಹೋದಾಗ ತಂಪು ಪಾನಿಯದ ಜಾಹಿರಾತಿನಲ್ಲಿ ದಿಲ್ ಮಾಂಗೆ ಮೋರ್ ಎಂದು ಬರೆದಿದ್ದನ್ನು ಓದಿದರು.     ಈ ಟೈಟಲ್ ನೋಡಿ  ರಾಮನ ಕುರಿತು ಯಾಕಾಗಬಾರದು ಎಂದು ಅವರು ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂದು ಗೀತೆ ರಚಿಸಿದರು.  ಈ ರಚನೆಯನ್ನು ಶ್ರೀಗಳಿಗೆ ತೋರಿಸಿದಾಗ ಅದನ್ನು ಮುಂದುವರೆಸಲು ಹೇಳಿದರು. ಹೀಗೆ ಈ ಗೀತೆ ರಚನೆಯಾಯ್ತು ಎಂದು   ಶರ್ಮಾರವರು  ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು