ಅಂಕೋಲಾ ವಿಧಾನಸಭಾ ಕ್ಷೇತ್ರ ಮಾದರಿಯಾಗಿ ಮಾರ್ಪಾಡು: ಶಾಸಕಿ ರೂಪಾಲಿ ನಾಯ್ಕ

ಕಾರವಾರ: ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದರೂ, ಇನ್ನಷ್ಟು ಅಭಿವೃದ್ಧಿ ಸಾಧಿಸಬೇಕಾಗಿದೆ. ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿಯಾಗಿ ರೂಪಿಸಬೇಕಾಗಿದೆ ಇದಕ್ಕಾಗಿ ಮತ್ತೊಮ್ಮೆ ತಾವೆಲ್ಲರೂ ಆಶೀರ್ವಾದ ನೀಡಿ ಬೆಂಬಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ರೂಪಾಲಿ ಎಸ್ ನಾಯ್ಕ ಹೇಳಿದರು.

ಅಂಕೋಲಾ ಶ್ರೀ ಗೆಳೆಯರ ಬಳಗ ಅವರ್ಸಾ ಹಟ್ಟಿಕೇರಿ ತಂಡದ ಸದಸ್ಯರ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತೀಯ ಜನತಾ ಪಕ್ಷದ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದೆ. ಇತ್ತಿಚೆಗೆ ಹಟ್ಟಿಕೇರಿಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಎಲ್ಲರ ಸಹಕಾರದಿಂದ ಅಭೂತಪೂರ್ವವಾಗಿ ನಡೆದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಶಿಸ್ತು ತತ್ವ ಸಿದ್ದಾಂತ ಹಾಗೂ ರೂಪಾಲಿ ಎಸ್.ನಾಯ್ಕ ಶಾಸಕರಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಚುನಾವಣೆಯಲ್ಲಿ ಅವರನ್ನು ಬೆಂಬಲಿಸಲು ಬಿಜೆಪಿ ಮುಖಂಡ ರಾಜೇಶ್ ಈರಾ ನಾಯ್ಕ ಅವರ ನೇತೃತ್ವದಲ್ಲಿ ಶ್ರೀ ಗೆಳೆಯರ ಬಳಗ ಅವರ್ಸಾ ಹಟ್ಟಿಕೇರಿ ತಂಡದ ಸದಸ್ಯರಾದ ಪ್ರಶಾಂತ್ ಕೆ ನಾಯ್ಕ, ದಿನೇಶ್ ಏನ್ ನಾಯ್ಕ, ಮಂಜುನಾಥ ಎಲ್ ನಾಯ್ಕ, ಶಾಂತು ಕೆ. ನಾಯ್ಕ. ಸಂತು ಎಲ್ ನಾಯ್ಕ, ಸೂರಜ್ ಎಲ್ ನಾಯ್ಕ, ಪ್ರಸಾದ್ ಆರ್ ನಾಯ್ಕ, ರಾಹುಲ್ ಎಸ್ ನಾಯ್ಕ, ಪಾಲ್ಗುಣ ಕೆ. ನಾಯ್ಕ, ಮಂಜುನಾಥ್ ಎಸ್ ನಾಯ್ಕ, ಸಾಗರ ಈಶ್ವರ್ ನಾಯ್ಕ, ಜಾನೇಶ್ವರ್ ಗೌಡ, ಸಂಜಯ ಆರ್. ನಾಯ್ಕ, ಸುಭಾಷ್ ಆರ್ ನಾಯ್ಕ, ಶಂಕರ್ ಎಲ್ ನಾಯ್ಕ, ಮಂಜುನಾಥ ಜೆ. ನಾಯ್ಕ, ನವೀನ್ ಈ. ನಾಯ್ಕ, ಸುರೇಶ್ ಪಿ ನಾಯ್ಕ, ರಾಜೇಂದ್ರ ನಾಯ್ಕ, ಮೆಣಸು ಪೀ. ನಾಯ್ಕ, ಲಿಂಗ ಪೀ ನಾಯ್ಕ, ಮುರಳಿ ಟಿ. ನಾಯ್ಕ, ಈಶ್ವರ್ ಕೆ, ನಾಯ್ಕ, ದಾಸ ಎಸ್. ನಾಯ್ಕ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಪಕ್ಷದ ಪ್ರಮುಖರಾದ ಚಂದ್ರಕಾಂತ ನಾಯ್ಕ, ಪಿ.ಪಿ.ನಾಯ್ಕ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Umesha HS

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

11 mins ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

22 mins ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

29 mins ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

1 hour ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

1 hour ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

2 hours ago